ADVERTISEMENT

ಕೊಪ್ಪಳ | ಜಿಲ್ಲಾಸ್ಪತ್ರೆಗೆ ಸಂಸದ ಹಿಟ್ನಾಳ ಭೇಟಿ; ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 14:38 IST
Last Updated 28 ಜೂನ್ 2025, 14:38 IST
ಕೊಪ್ಪಳ ಜಿಲ್ಲಾಸ್ಪತ್ರೆಗೆ ಶನಿವಾರ ಸಂಸದ ರಾಜಶೇಖರ ಹಿಟ್ನಾಳ ಭೇಟಿ ನೀಡಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು
ಕೊಪ್ಪಳ ಜಿಲ್ಲಾಸ್ಪತ್ರೆಗೆ ಶನಿವಾರ ಸಂಸದ ರಾಜಶೇಖರ ಹಿಟ್ನಾಳ ಭೇಟಿ ನೀಡಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು   

ಕೊಪ್ಪಳ: ಸಂಸದ ರಾಜಶೇಖರ ಹಿಟ್ನಾಳ ಅವರು ಶನಿವಾರ ಇಲ್ಲಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ವಚ್ಛತೆಗೆ ಆದ್ಯತೆ ನೀಡುವಂತೆ ಅಲ್ಲಿನ ಸಿಬ್ಬಂದಿಗೆ ಸೂಚಿಸಿದ್ದಾರೆ. 

ಆಸ್ಪತ್ರೆಯ ಕುಂದುಕೊರತೆ, ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳ ಬಗ್ಗೆ ರೋಗಿಗಳಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಪ್ರತಿ ವಾರ್ಡ್‌ಗಳು, ವೈದ್ಯರು ಕೊಠಡಿಗೆ ತೆರಳಿ ರೋಗಿಗಳನ್ನೂ ಭೇಟಿ ಮಾಡಿದರು. ಚಿಕಿತ್ಸೆ ನೀಡಲಾಗುತ್ತಿದೆಯೇ? ಸಿಬ್ಬಂದಿ ನಿಮ್ಮ ಬೇಕು ಬೇಡಗಳಿಗೆ ಸ್ಪಂದಿಸುತ್ತಿದ್ದಾರೆಯೇ? ಸೇರಿದಂತೆ ಇನ್ನಿತರ ವಿಷಯಗಳನ್ನು ಹಿಟ್ನಾಳ ತಿಳಿದುಕೊಂಡರು.

ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ, ಆಡಳಿತಾಧಿಕಾರಿ ಬಿ.ಕಲ್ಲೇಶ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕಾಲೇಜಿನ ನಾಮನಿರ್ದೇಶಿತ ಸದಸ್ಯ ಸಲೀಂ ಅಳವಂಡಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.