ಮುನಿರಾಬಾದ್: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನಡೆದ ರಕ್ತದಾನ ಶಿಬಿರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಯೂಬ್ ಖಾನ್, ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಚ್. ತೊಗರಿ, ವೈದ್ಯಾಧಿಕಾರಿ ಡಾ.ರಾಜಶೇಖರ್ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಜಿಲ್ಲಾಡಳಿತ, ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ, ಕರ್ನಾಟಕ ರಕ್ತದಾನಿಗಳ ಬಳಗ, ವಿವಿಧ ಸಂಘ–ಸಂಸ್ಥೆಗಳ ಆಶ್ರಯ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ ಕೊಪ್ಪಳ ಸಹಯೋಗದಲ್ಲಿ ಶಿಬಿರ ನಡೆಯಿತು.
ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಅಂಬುಜಾಕ್ಷಿ, ಶ್ವೇತಾ ಮತ್ತು ಶುಶ್ರೂಷಕರು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೌಭಾಗ್ಯ ನಾಗರಾಜ, ಸದಸ್ಯ ಶೇರುಲಾಲ್, ಸಿಬ್ಬಂದಿ ದೊಡ್ಡಬಸಪ್ಪ ಹಾಗೂ ಸಾರ್ವಜನಿಕರು ಸೇರಿದಂತೆ 33 ಜನ ರಕ್ತದಾನ ಮಾಡಿದರು.
ಗುತ್ತಿಗೆದಾರ ಶ್ರೀನಿವಾಸ, ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಾಲಚಂದ್ರನ್, ಆಪ್ತಸಮಾಲೋಚಕ ಚಿದಾನಂದ ಇಂಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.