ADVERTISEMENT

ಶ್ರಮದಿಂದ ಮಾತ್ರ ಸಂಗೀತ ಸಾಧನೆ: ಜಿ. ಕೆ. ವಿಶ್ವನಾಥ ಗೌಡ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 5:15 IST
Last Updated 20 ಸೆಪ್ಟೆಂಬರ್ 2022, 5:15 IST
ಕೊಪ್ಪಳದ ವಿಠ್ಠಲಕೃಷ್ಣ ದೇವಸ್ಥಾನದಲ್ಲಿ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆ ನಡೆಯಿತು
ಕೊಪ್ಪಳದ ವಿಠ್ಠಲಕೃಷ್ಣ ದೇವಸ್ಥಾನದಲ್ಲಿ ಸುಗಮ ಸಂಗೀತ ಕಾರ್ಯಕ್ರಮದ ಉದ್ಘಾಟನೆ ನಡೆಯಿತು   

ಕೊಪ್ಪಳ: ‘ಸಂಗೀತ ವಿದ್ಯೆ ಸುಲಭವಾಗಿ ದೊರಕುವಂತಹುದಲ್ಲ. ಅದಕ್ಕೆ ಸಾಕಷ್ಟು ಶ್ರಮ ಮತ್ತು ಸಾಧನೆ ಅವಶ್ಯಕತೆ ಇದೆ‘ ಎಂದು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಚಾರ್ಯ ಜಿ. ಕೆ. ವಿಶ್ವನಾಥ ಗೌಡ ಅಭಿಪ್ರಾಯಪಟ್ಟರು.

ನಗರದ ವಿಠ್ಠಲಕೃಷ್ಣ ದೇವಸ್ಥಾನದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ, ಬನ್ನಿಕೊಪ್ಪದ ಕಲಾರಂಗ ಸಂಸ್ಥೆ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಸುಗಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ಕಲಾವಿದರಿಗೆ ಪ್ರೋತ್ಸಾಹದ ಅಗತ್ಯವಿದ್ದು ಕಲೆ ಹಾಗೂ ಸಂಗೀತ ಉಳಿಯಬೇಕಾದರೆ ಮಕ್ಕಳನ್ನು ಪ್ರೇರೇಪಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ವೆಂಕಟೇಶ ಪ್ರಸಾದ, ಜಗದಯ್ಯ ಸಾಲಿಮಠ, ಹಾಗೂ ಶ್ರೀದೇವಿ ಕಾಶಿ ಅವರನ್ನು ಸನ್ಮಾನಿಸಲಾಯಿತು.

ADVERTISEMENT

ಶಾಂತಾ ಕುಲಕರ್ಣಿ ದಾಸರ ಪದ ಮತ್ತು ಭಾವಗೀತೆಗಳನ್ನು ಹಾಡಿದ್ದರು. ಪ್ರಜ್ಞಾ ಕೀಲಿ ಹಾರ್ಮೋನಿಯಂ ಸಾತ್‌ ನೀಡಿದರು. ಫಕೀರಪ್ಪ ಕುಂಟಗೆರಿ ಹಂಸವಾಹಿನಿ ಸಂಗೀತ ಪಾಠಶಾಲೆ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದರು. ಜ್ಯೋತಿ ಸಿದ್ಧಾಂತಿ, ಸಂತೋಷ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.