ADVERTISEMENT

ಶಾಲೆ ಅಭಿವೃದ್ಧಿಗೆ ಕಾಳಜಿ ಅವಶ್ಯ- ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ. ಕಳ್ಳಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 11:40 IST
Last Updated 7 ಜನವರಿ 2022, 11:40 IST
ಯಲಬುರ್ಗಾ ತಾಲ್ಲೂಕು ಬಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಪಾಲಕರ ಮತ್ತು ಶಾಲಾಭಿವೃದ್ಧಿ ಸಮಿತಿ ಸಭೆಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ ಚಾಲನೆ ನೀಡಿದರು
ಯಲಬುರ್ಗಾ ತಾಲ್ಲೂಕು ಬಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಪಾಲಕರ ಮತ್ತು ಶಾಲಾಭಿವೃದ್ಧಿ ಸಮಿತಿ ಸಭೆಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ.ಕಳ್ಳಿ ಚಾಲನೆ ನೀಡಿದರು   

ಯಲಬುರ್ಗಾ: ‘ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಸಾಧನೆ ಮಾಡಿದರೆ ಸರ್ಕಾರದ ಪ್ರಯತ್ನ ಸಾರ್ಥಕ’ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಫ್.ಎಂ. ಕಳ್ಳಿ ಹೇಳಿದರು.

ತಾಲ್ಲೂಕಿನ ಬಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಸರ್ಕಾರಿ ಬಾಲಕಿಯರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ಅಭಿವೃದ್ಧಿ ಹಾಗೂ ಪಾಲಕರ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆವಿಶೇಷ ಕಾಳಜಿ ತೋರುತ್ತಿರುವುದರಿಂದ ಸಾಕಷ್ಟು ಯೋಜನೆಗಳು ವಿದ್ಯಾರ್ಥಿಗಳ ಕಲ್ಯಾಣಕ್ಕೆ ಹಾಗೂ ಅವರ ಶೈಕ್ಷಣಿಕ ಸುಧಾರಣೆಗೆ ಪೂರಕವಾಗಿವೆ’ ಎಂದರು.

ADVERTISEMENT

ಸಂಪನ್ಮೂಲ ವ್ಯಕ್ತಿ ಮಹೇಶ ಅಸೂಟಿ ಮಾತನಾಡಿ, ‘ಯಾವುದೇ ಶಾಲೆಯಾಗಿರಲಿ ಅಲ್ಲಿಯ ಪಾಲಕರು ಮತ್ತು ಸಾರ್ವಜನಿಕರ ಸಹಭಾಗಿತ್ವ ಅವಶ್ಯಕವಾಗಿರುತ್ತದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಾಲಕರ ಜವಾಬ್ದಾರಿ ಹೆಚ್ಚಿದೆ’ ಎಂದು ಅವರು ಹೇಳಿದರು.

ಮುಖ್ಯಶಿಕ್ಷಕ ಎಂ. ನಾಗಪ್ಪ ಮಾತನಾಡಿದರು.

ಆರ್.ಸುಮಂಗಲ, ವೀರನಗೌಡ, ಗೆದಿಗೆಮ್ಮ, ವಿಜಯಲಕ್ಷ್ಮಿ, ವೀರನಗೌಡ, ಎಸ್.ಬಿ.ಬಿಲ್ಲರ, ಬಸಮ್ಮ ತೊಂಡಿಹಾಳ, ರೇಣುಕಾ ನಿಂಬನಗೌಡ್ರ, ಶ್ವೇತಾ ಭದ್ರಗೌಡ್ರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವೀರಣ್ಣ ಸೂಡಿ, ಸದಸ್ಯರಾದ ರಾಚಯ್ಯ ದೇವಲಾಪೂರಮಠ, ಮಾರುತಿ ಮೇಟಿ, ಶರಣಪ್ಪ ಸೋಲಬಗೌಡ್ರ, ಅಂದಾನಗೌಡ ನಿಂಬನಗೌಡ್ರ, ಶರಣಪ್ಪ ತಳವಾರ, ದೊಡ್ಡಬಸಪ್ಪ ಮೂಲಿಮನಿ, ಬಾಳನಗೌಡ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.