ಕಾರಟಗಿ: ಜಮೀನಿಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ವೃದ್ಧರೊಬ್ಬರು ಮೃತಪಟ್ಟ ಘಟನೆ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದ ನಿವಾಸಿ ಮರಿಯಪ್ಪ ಹಿರೇಮನಿ (60) ಮೃತಪಟ್ಟವರು. ಇವರು ಆ. 12ರಂದು ಜಮೀನಿಗೆ ತೆರಳುವಾಗ ಲಕ್ಷ್ಮೀ ವೇ ಬ್ರಿಡ್ಜ್ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಚಾಲಕ ಕಾರು ಸಹಿತ ಪರಾರಿಯಾಗಿದ್ದಾನೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಅವರಿಗೆ ಕಾರಟಗಿ ಹಾಗೂ ಗಂಗಾವತಿಯಲ್ಲಿ ಚಿಕಿತ್ಸೆ ಕೊಡಿಸಿ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ (ಆ.17) ಮೃತಪಟ್ಟರು ಎಂದು ಅವರ ಪುತ್ರ ತಿಮ್ಮಣ್ಣ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.