ADVERTISEMENT

ಮೀಸಲಾತಿ ನೀಡಲು ಒಂದು ತಿಂಗಳು ಗಡುವು: ವಚನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 16:50 IST
Last Updated 5 ಮಾರ್ಚ್ 2023, 16:50 IST
ವಚನಾನಂದ ಸ್ವಾಮೀಜಿ
ವಚನಾನಂದ ಸ್ವಾಮೀಜಿ   

ಕೊಪ್ಪಳ: ‘ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಬೇಕು. ಒಂದು ತಿಂಗಳಲ್ಲಿ ಈ ಕುರಿತು ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ರಾಜಕೀಯ ಸ್ಪಷ್ಟತೆಯ ಬಗ್ಗೆ ಸಮಾಜ ನಿರ್ಧಾರ ಕೈಗೊಳ್ಳಲಿದೆ’ ಎಂದು ಪಂಚಮಸಾಲಿ ಸಮಾಜದ ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಓಜನಳ್ಳಿ ಗ್ರಾಮದಲ್ಲಿ ಭಾನುವಾರ ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ ಹಾಗೂ ಸರ್ವಧರ್ಮ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ‘ಸಮಾಜಕ್ಕೆ ಮೀಸಲಾತಿ ನೀಡದಿದ್ದರೆ ಅದರ ಪರಿಣಾಮ ಗಂಭೀರವಾಗಿ ಎದುರಿಸಬೇಕಾಗುತ್ತದೆ. ಈಗ ಚುನಾವಣೆಯ ಕಾವು ಇದ್ದು, ನಮ್ಮ ಸಮಾಜಕ್ಕೆ ನೀವು ಗಟ್ಟಿಯಾಗಿ ನಿಂತರೆ ಮಾತ್ರ ನಾವು ನಿಮ್ಮೊಂದಿಗೆ ಇರುತ್ತೇವೆ. ವಿರೋಧ ಪಕ್ಷದವರು ಕೂಡ ಅಡ್ಡಗೋಡೆಯ ಮೇಲೆ ದೀಪವಿಟ್ಟಿದ್ದಾರೆ. ಮೀಸಲಾತಿ ವಿಷಯವನ್ನು ಪ್ರಣಾಳಿಕೆಯಲ್ಲಿ ಸೇರಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT