ADVERTISEMENT

ಕೊಪ್ಪಳ: ಅಡುಗೆ ಭಟ್ಟನನ್ನು ಹೊತ್ತೊಯ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 2:52 IST
Last Updated 5 ನವೆಂಬರ್ 2020, 2:52 IST
ಹುಲುಗೇಶ
ಹುಲುಗೇಶ   

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಆನೆಗೊಂದಿ ಸಮೀಪದ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆಭಟ್ಟನನ್ನು ಚಿರತೆ ಹೊತ್ತೊಯ್ದ ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.

ಹುಲುಗೇಶ (24) ಚಿರತೆ ದಾಳಿಗೆ ಬಲಿಯಾದ ಆಡುಗೆ ಭಟ್ಟ

ಕಳೆದ ಆರೇಳು ವರ್ಷಗಳಿಂದ ದೇಗುಲದಲ್ಲಿ ಆಡುಗೆ ಮಾಡಿಕೊಂಡಿದ್ದ ಹುಲಗೇಶ ಬರ್ಹಿದೆಸೆಗೆ ಹೋದಾಗ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ.

ADVERTISEMENT

ಆನೆಗೊಂದಿಯ ಮ್ಯಾಗೋಟದ ಬಳಿ ದೇಹದ ಭಾಗಗಳು ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು, ತಹಶೀಲ್ದಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆ ಈ ಭಾಗದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ಹಿಡಿದು ವಾಜಪೇಯ ಜೈವಿಕ ಉದ್ಯಾನಕ್ಕೆ ಸ್ಥಳಾಂತರಿಸಲಾಗಿತ್ತು.

ಈಗ ಅಡುಗೆ ಭಟ್ ನನ್ನು ಹೊತ್ತುಕೊಂಡು ಹೋಗಿ ಸಾಯಿಸಿರುವ ಘಟನೆ ತೀವ್ರ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.