ADVERTISEMENT

ಕಾರ್ಯಕರ್ತರು ಪಕ್ಷದ ಬುನಾದಿ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:01 IST
Last Updated 23 ನವೆಂಬರ್ 2020, 16:01 IST
ಗಂಗಾವತಿ ತಾಲ್ಲೂಕಿನ ಹೇಮಗುಡ್ಡದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪೇರಲ ಹಣ್ಣು ಖರೀದಿಸಿದರು
ಗಂಗಾವತಿ ತಾಲ್ಲೂಕಿನ ಹೇಮಗುಡ್ಡದ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪೇರಲ ಹಣ್ಣು ಖರೀದಿಸಿದರು   

ಗಂಗಾವತಿ: ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದರು.

ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಡಿ.ಕೆ ಶಿವಕುಮಾರ್‌ ಅವರನ್ನು ಸನ್ಮಾನಿಸಿದರು.

ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಡಿಕೆಶಿ,‘ಪಕ್ಷದ ಏಳಿಗೆಗೆ ಕಾರ್ಯಕರ್ತರು ಬುನಾದಿ ಇದ್ದ ಹಾಗೇ, ನಿಮ್ಮ ಶ್ರಮ ಅಪಾರವಾದದ್ದು, ಎಲ್ಲರೂ ಪಕ್ಷದ ಏಳಿಗೆಗೆ ದುಡಿಯೋಣ’ ಎಂದರು.

ADVERTISEMENT

ಇನ್ನು, ಡಿಕೆಶಿಯನ್ನು ಭೇಟಿಯಾಗಲು ಅನ್ಸಾರಿ ನಿವಾಸದಲ್ಲಿ ಸಾಕಷ್ಟು ಕಾರ್ಯಕರ್ತರು ಸೇರಿದ್ದರು. ಫೋಟೊ ತೆಗೆದುಕೊಳ್ಳಲು ಮುಗಿಬಿದ್ದ ದೃಶ್ಯಗಳು ಕಂಡಬಂದವು.

‌ಕಾಂಗ್ರೆಸ್‌ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್‌, ಅಮರೇಗೌಡ ಬಯ್ಯಾಪುರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ್‌, ಜಿಲ್ಲಾ ಪಂಚಾಯಿತಿ ಸದಸ್ಯ ಅಮರೇಶ ಗೋನಾಳ್‌, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಾಮೀದ್‌ ಮನಿಯಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.