ADVERTISEMENT

ಬಾವಿಯಲ್ಲಿ ಬಿದ್ದು ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಸಾವು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 15:30 IST
Last Updated 23 ಸೆಪ್ಟೆಂಬರ್ 2022, 15:30 IST
ಶಿವಪುತ್ರಪ್ಪ ಬಿಳಿಗುಡ್ಡ
ಶಿವಪುತ್ರಪ್ಪ ಬಿಳಿಗುಡ್ಡ   

ಕನಕಗಿರಿ (ಕೊಪ್ಪಳ): ಕನಕಗಿರಿ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಶಿವಪುತ್ರಪ್ಪ ಬಿಳಿಗುಡ್ಡ (43) ಇಲ್ಲಿನ ವೆಂಕಟಪತಿ ಬಾವಿಯ ಸಮೀಪ ವಾಯುವಿಹಾರಕ್ಕೆ ಬಂದಿದ್ದ ವೇಳೆ ಆಯತಪ್ಪಿ ಕಾಲುಜಾರಿ ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.

ಬಾವಿಯಲ್ಲಿ ಬಿದ್ದಾಗ ಬಲಗಾಲಿನ ಮೊಣಕಾಲು ಮತ್ತು ತಲೆಗೆ ಬಲವಾಗಿ ಪೆಟ್ಟು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಪುತ್ರಪ್ಪ ಮೂಲತಃ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಗ್ರಾಮದವರು. ಈ ಮೊದಲು ಅಳವಂಡಿ, ಕುಷ್ಟಗಿ ಮತ್ತು ಗಂಗಾವತಿ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ADVERTISEMENT

ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಪಿಐ ವಿ. ನಾರಾಯಣ ಅವರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.