ADVERTISEMENT

ಸ್ಥಳೀಯ ಚುನಾವಣೆಗೆ ಸಜ್ಜಾಗಿ: ಬಿ.ಸಿ.ಪಾಟೀಲ

ಪ್ರದೀಪ ಗೌಡ ಮಾಲಿ ಪಾಟೀಲ ಬಿಜೆಪಿ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 8:06 IST
Last Updated 15 ಜುಲೈ 2021, 8:06 IST
ಅಳವಂಡಿ ಸಮೀಪದ ಕವಲೂರು ಗ್ರಾಮದಲ್ಲಿ ಜೆಡಿಎಸ್ ಮುಖಂಡ ಪ್ರದೀಪ ಗೌಡ ಪಾಟೀಲ ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡರು
ಅಳವಂಡಿ ಸಮೀಪದ ಕವಲೂರು ಗ್ರಾಮದಲ್ಲಿ ಜೆಡಿಎಸ್ ಮುಖಂಡ ಪ್ರದೀಪ ಗೌಡ ಪಾಟೀಲ ಹಾಗೂ ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡರು   

ಅಳವಂಡಿ: ಪ್ರದೀಪ ಗೌಡ ಮಾಲಿ ಪಾಟೀಲ ಅವರು ಭಾರತೀಯ ಜನತಾ ಪಾರ್ಟಿಗೆ ಸೇರಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಅಳವಂಡಿ ಸಮೀಪದ ಕವಲೂರು ಗ್ರಾಮದಲ್ಲಿ ನಡೆದ ಜೆಡಿಎಸ್ ಮುಖಂಡ ಪ್ರದೀಪ ಗೌಡ ಪಾಟೀಲ ಹಾಗೂ ಶರಣಪ್ಪಗೌಡ ಪಾಟೀಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತದೆ. ಬಿಜೆಪಿ ಪ್ರಪಂಚದಲ್ಲಿಯೇ ಅತಿ ಹೆಚ್ಚು ಕಾರ್ಯ ಕರ್ತರನ್ನು ಹೊಂದಿದೆ. ಹಾಗಾಗಿ ಮುಂಬರುವ ತಾ.ಪಂ, ಜಿ.ಪಂ ಚುನಾವಣೆಯನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆಗಲಿ ಗೆಲ್ಲಿಸಿ ಎಂದರು.

ADVERTISEMENT

ಸಂಸದ ಸಂಗಣ್ಣ ಕರಡಿ ಮಾತನಾಡಿ, ಈ ಭಾಗದಲ್ಲಿ ಕೃಷಿ ಅವಲಂಬಿಸಿರುವ ಗ್ರಾಮಗಳಿವೆ. ಶಿಂಗಟಾಲೂರ ಏತ ನೀರಾವರಿ ಯೋಜನೆ ಬಗ್ಗೆ ಚರ್ಚಿಸಿ ಪೂರ್ಣಗೊಳಿಸಲಾಗುವುದು. ಈ ಭಾಗದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದರು.

ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ ಪಾಟೀಲ, ಬಿಜೆಪಿ ‌ಮಂಡಲ ತಾಲ್ಲೂಕು ಅಧ್ಯಕ್ಷ ಪ್ರದೀಪ ಹಿಟ್ನಾಳ, ಈಶಪ್ಪ ಮಾದಿನೂರ, ಸುನಂದಾ ಗದ್ದಿಕೇರಿ, ಡಿ.ಮಲ್ಲಣ್ಣ ಹಾಗೂ ಪಕ್ಷದ ಮುಖಂಡರು, ಕಾರ್ಯ ಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.