ADVERTISEMENT

ಶಾಲೆಗಳಲ್ಲಿ ಶೌಚಾಲಯ ಕೊರತೆ: ಪ್ರಜಾವಾಣಿ ವರದಿ ಉಲ್ಲೇಖಿಸಿದ ಮುಖ್ಯಮಂತ್ರಿ ಚಂದ್ರು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2023, 13:47 IST
Last Updated 12 ಅಕ್ಟೋಬರ್ 2023, 13:47 IST
   

ಕೊಪ್ಪಳ: ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಸರಿಯಾಗಿ ಸೌಲಭ್ಯಗಳನ್ನು ಕಲ್ಪಿಸದೇ ಸರ್ಕಾರ ಅವುಗಳನ್ನು ಕೊಲೆ ಮಾಡುತ್ತಿದೆ ಎಂದು ಅಮ್‌ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರದ ಸಂಚಿಕೆಯಲ್ಲಿ ‘ಪ್ರಜಾವಾಣಿ’ಯ ಮುಖಪುಟದಲ್ಲಿ ಕುಷ್ಟಗಿಯ ‘ಸಾವಿರ ವಿದ್ಯಾರ್ಥಿನಿಯರಿಗೆ ಇರುವುದೊಂದೇ ಶೌಚಾಲಯ’ ವಿಶೇಷ ವರದಿ ಪ್ರಸ್ತಾಪಿಸಿದ ಅವರು ‘ಸರ್ಕಾರಿ ಕಾಲೇಜುಗಳಲ್ಲಿ ಬಡವರ ಮಕ್ಕಳು ಓದುತ್ತಾರೆ. ಅಲ್ಲಿ ಶೌಚಾಲಯ ನಿರ್ಮಿಸಲು ಸರ್ಕಾರಕ್ಕೆ ಏನು ದಾಡಿ’ ಎಂದು ಕಟುವಾಗಿ ಪ್ರಶ್ನಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡತನದ ಹಿನ್ನೆಲೆಯಿಂದ ಬಂದವರು. ಬಡವರ ಕಷ್ಟದ ಬಗ್ಗೆ ಅವರಿಗೆ ಗೊತ್ತಿದೆ. ವಿಶೇಷ ಕಾಳಜಿ ವಹಿಸಿ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.