ADVERTISEMENT

ಆಸ್ತಿ ವಿವಾದ: ಗುಂಡಿಟ್ಟು ತಮ್ಮನನ್ನೇ ಕೊಂದ ಅಣ್ಣ

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 13:27 IST
Last Updated 4 ಜೂನ್ 2022, 13:27 IST
ಮೃತ ವಿನಾಯಕ ದೇಸಾಯಿ
ಮೃತ ವಿನಾಯಕ ದೇಸಾಯಿ   

ಕೊಪ್ಪಳ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಜಿಲ್ಲೆಯ ಅಳವಂಡಿ ತಾಲ್ಲೂಕಿನ ಕವಲೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ವಿನಾಯಕ ದೇಸಾಯಿ (32) ಕೊಲೆಯಾದವರು. ಇವರ ಅಣ್ಣ ರಾಘವೇಂದ್ರ ದೇಸಾಯಿ ಕೊಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಡುವೆ ಹಲವು ವರ್ಷಗಳಿಂದ ಆಸ್ತಿಗಾಗಿ ಜಗಳ ನಡೆಯುತ್ತಿತ್ತು.

ರಾಘವೇಂದ್ರ ಹೊಲದಲ್ಲಿ ಬಿತ್ತನೆ ಮಾಡುವಾಗ ಅದನ್ನು ತಡೆಯಲು ವಿನಾಯಕ‌ ತೆರಳಿದಾಗ ಘಟನೆ ನಡೆದಿದೆ. ಉದ್ರಿಕ್ತಗೊಂಡು ರಾಘವೇಂದ್ರ ಗುಂಡು ಹಾರಿಸಿದ್ದಾನೆ.

ADVERTISEMENT

ಸ್ಥಳಕ್ಕೆ ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಭೇಟಿ ನೀಡಿ ಮಾಹಿತಿ ಪಡೆದರು. ಆರೋಪಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.