ADVERTISEMENT

ಮರುಪರಿಷ್ಕೃತ ಪಠ್ಯಪುಸ್ತಕ ವಾಪಸ್‌ ಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 12:55 IST
Last Updated 10 ಜೂನ್ 2022, 12:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಪ್ಪಳ: ಸರ್ಕಾರದ ಆದೇಶವಿಲ್ಲದೆ ಕಾನೂನು ಬಾಹಿರವಾಗಿ ರಚಿಸಿದ ಮರುಪರಿಷ್ಕೃತ ಪಠ್ಯಗಳನ್ನು ವಾಪಸ್‌ ಪಡೆಯಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದ್ದಾರೆ.

‘ರೋಹಿತ್ ಚಕ್ರತೀರ್ಥ ಅವರ ನೇತೃತ್ವದ ಪಠ್ಯಪರಿಷ್ಕರಣಾ ಸಮಿತಿಯು ಸರ್ಕಾರದ ಆದೇಶವಿಲ್ಲದೆ ಕಾರ್ಯನಿರ್ವಹಿಸಿರುವುದು ಅನೈತಿಕ ಮತ್ತು ಅನ್ಯಾಯದ ಕ್ರಮವಾಗಿದೆ. ಪ್ರಜಾತಂತ್ರ ನೀತಿ ನಿಯಮಗಳನ್ನು ಗಾಳಿಗೆ ತೂರಿ ಕೆಲಸಮಾಡಿದೆ. ಆದ್ದರಿಂದ ಈ ಕೂಡಲೇ ಈ ಮರು ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕು‘ ಎಂದು ಒತ್ತಾಯಿಸಿದ್ದಾರೆ.

‘ಬೆಂಗಳೂರಿನಲ್ಲಿ ನಡೆದ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯಮಟ್ಟದ ಪಠ್ಯಪುಸ್ತಕ ತಿರುಚುವಿಕೆಯ ವಿರುದ್ಧದ ಸಭೆಯಲ್ಲಿ ನಾಡಿನ ಹೆಸರಾಂತ ಕವಿಗಳು, ಲೇಖಕರು, ಚಿಂತಕರು ಹಾಗೂ ಶಿಕ್ಷಣ ತಜ್ಞರು ಈ ವಿಷಯವನ್ನು ದಾಖಲೆಗಳ ಸಮೇತ ಪ್ರಸ್ತಾಪಿಸಿದ್ದರು. ಐತಿಹಾಸಿಕ ಸತ್ಯಗಳನ್ನು ತಿರುಚಿರುವ ಸಮಿತಿಯ ಪರಿಷ್ಕರಣೆಯನ್ನು ಒಕ್ಕೊರಲಿನಿಂದ ವಿರೋಧಿಸಿದ್ದರು‘ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.