ADVERTISEMENT

ಕೊಪ್ಪಳ | ಪ್ರೌಢಶಾಲೆಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 8:26 IST
Last Updated 3 ಡಿಸೆಂಬರ್ 2022, 8:26 IST
ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದ ಪ್ರೌಢಶಾಲೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಪದಾಧಿಕಾರಿಗಳು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು
ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದ ಪ್ರೌಢಶಾಲೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಪದಾಧಿಕಾರಿಗಳು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು   

ಕೊಪ್ಪಳ: ತಾಲ್ಲೂಕಿನ ಹಾಲವರ್ತಿ ಗ್ರಾಮದ ಪ್ರೌಢಶಾಲೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಬುಧವಾರ ಅಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್ಒ) ಸಂಘಟನೆ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ ‘ಪ್ರೌಢಶಾಲೆ ಆರಂಭವಾಗಿ ಐದಾರು ವರ್ಷಗಳಾದರೂ ಶೌಚಾಲಯ, ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ. ಶೌಚಾಲಯದ ಸಮಸ್ಯೆಯಿಂದಾಗಿ ಎಷ್ಟೋ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿಲ್ಲ. ಶುದ್ಧ ಕುಡಿಯುವ ನೀರು ಸಿಗದ ಕಾರಣ ಹತ್ತಿರದಲ್ಲೇ ಸಿಗುವ ಕಲುಷಿತ ನೀರೇ ಗತಿಯಾಗಿದೆ’ ಎಂದು ದೂರಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನಹರಿಸಿ ಕೂಡಲೇ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಸಲ್ಲಿಸಿದರು. ಸಂಘಟನೆ ಸದಸ್ಯರಾದ ಅಶೋಕ್, ಶಂಕರ್, ಪ್ರದೀಪ್, ಉಷಾ, ಮನೋಜ್ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.