ADVERTISEMENT

ದಢೇಸಗೂರ ಮೇಲಿನ ಆರೋಪ ತಳ್ಳಿ ಹಾಕುವುದಿಲ್ಲ, ವಿಚಾರಣೆ ನಡೆಯಲಿ: ಆನಂದ್ ಸಿಂಗ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 7:22 IST
Last Updated 5 ಸೆಪ್ಟೆಂಬರ್ 2022, 7:22 IST
ಆನಂದ್ ಸಿಂಗ್
ಆನಂದ್ ಸಿಂಗ್   

ಕೊಪ್ಪಳ: ಶಾಸಕ ಬಸವರಾಜ ದಢೇಸಗೂರ ವಿರುದ್ಧ ಕೇಳಿ ಬಂದಿರುವ ಆರೋಪ ತಳ್ಳಿ ಹಾಕುವುದಿಲ್ಲ. ಈ ಕುರಿತು ವಿಚಾರಣೆ ನಡೆಯಲಿ ಎಂದು ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಪ್ರತಿಕ್ರಿಯಿಸಿದರು.

ಮಾಧ್ಯಮಗಳ ಜೊತೆ ಸೋಮವಾರ ಮಾತನಾಡಿ 'ದಢೇಸಗೂರ ಜೊತೆ ಮಾತನಾಡಿದ್ದೇನೆ. ಯಾರಿಂದಲೂ ಹಣ ಪಡೆದಿಲ್ಲ ಎಂದು ಹೇಳಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯಲಿ. ಯಾರನ್ನೂ ಸಮರ್ಥಿಸಿಕೊಳ್ಳುವುದಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.