ADVERTISEMENT

‘ರಾಹುಲ್ ಚುನಾವಣೆಗಾಗಿ ಹಿಂದೂ ಆಗುತ್ತಾರೆ’

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 19:06 IST
Last Updated 20 ಏಪ್ರಿಲ್ 2019, 19:06 IST

ಕಾರಟಗಿ (ಕೊಪ್ಪಳ ಜಿಲ್ಲೆ): ಪ್ರಧಾನಿ ನರೇಂದ್ರ ಮೋದಿ ಅವರು ದೇವರ ಭಕ್ತರಾಗಿದ್ದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಭಕ್ತ ಎಂದು ಬಿಜೆಪಿಯ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಲೇವಡಿ ಮಾಡಿದರು.

ಪಟ್ಟಣದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಮ್ಮಿಕೊಂಡಿದ್ದ ಪ್ರಚಾರಸಭೆಯಲ್ಲಿ ಮಾತನಾಡಿದ ಅವರು, :ರಾಹುಲ್‌ ಗಾಂಧಿ ಚುನಾವಣೆಗೋಸ್ಕರ ಹಿಂದೂ ಆಗುತ್ತಾರೆ. ಪ್ರಧಾನಿ ಮೋದಿ ಶ್ರದ್ಧಾವಂತ ಹಿಂದೂ ಆಗಿದ್ದಾರೆ’ ಎಂದರು.

‘ರಾಹುಲ್ ಗಾಂಧಿ ಪಂಚೆ ಕಟ್ಟಿಕೊಂಡು ದೇವಸ್ಥಾನಕ್ಕೆ ಹೋದರೆ ಜೋಕರ್ ಹೋದ ಹಾಗೆ ಆಗುತ್ತದೆ. ಗಂಡ ಇದ್ದರೂ ಪ್ರಿಯಾಂಕಾ ಗಾಂಧಿ ಹಣೆ ಮೇಲೆ ಕುಂಕುಮ ಇರಲಿಲ್ಲ. ಬೇಕಾದರೆ ಆರು ತಿಂಗಳ ಹಿಂದಿನಭಾವಚಿತ್ರ ನೋಡಿ. ಇದೀಗಚುನಾವಣೆಗಾಗಿ ಹಣೆ ಮೇಲೆ ತಿಲಕ ಕಾಣುತ್ತಿದೆ’ ಎಂದು ವ್ಯಂಗ್ಯ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.