ADVERTISEMENT

ಮೌಲ್ಯ ಉಳಿಸಿಕೊಂಡ ರಂಗಭೂಮಿ: ಅರವಿಂದಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 10:42 IST
Last Updated 7 ಮಾರ್ಚ್ 2022, 10:42 IST
ಯಲಬುರ್ಗಾ ತಾಲ್ಲೂಕು ಜಿ.ವೀರಾಪುರ ಗ್ರಾಮದಲ್ಲಿ ಆಯೋಜಿಸಿದ್ದ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು
ಯಲಬುರ್ಗಾ ತಾಲ್ಲೂಕು ಜಿ.ವೀರಾಪುರ ಗ್ರಾಮದಲ್ಲಿ ಆಯೋಜಿಸಿದ್ದ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು   

ಯಲಬುರ್ಗಾ: ಜೀವಂತ ಕಲೆ ಎಂದೇ ಕರೆಯಲ್ಪಡುವ ರಂಗಭೂಮಿ ಕಲೆಯು ಗ್ರಾಮೀಣ ಜನರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದಿಗೂ ತನ್ನ ಮೌಲ್ಯದೊಂದಿಗೆ ಪ್ರದರ್ಶನಗೊಳ್ಳುತ್ತಿರುವ ರಂಗಭೂಮಿ ಕಲೆಯನ್ನು ಪ್ರತಿಯೊಬ್ಬರೂ ಪ್ರೋತ್ಸಾಹಿಸಿ ಕಲಾವಿದರನ್ನು ಬೆಂಬಲಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ ಹೇಳಿದರು.

ತಾಲ್ಲೂಕಿನ ಜಿ.ವೀರಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಸಾಮಾಜಿಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಸುಧಾರಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸುವ ನಾಟಕಗಳನ್ನು ನೋಡಿಯೇ ಅನೇಕ ಕುಟುಂಬಗಳು ಸುಧಾರಿಸಿವೆ ಎಂದರು.

ಗಣ್ಯರಾದ ಅಂದಾನಗೌಡ ಪಾಟೀಲ, ಈಶ್ವರ ಅಟಮಾಳಗಿ ಮಾತನಾಡಿದರು. ಗುತ್ತಿಗೆದಾರ ಬಾಲಚಂದ್ರ ಸಲಭಾವಿ, ಶಂಭುಲಿಂಗಸ್ವಾಮಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.