ಕುಷ್ಟಗಿ: ತಾಲ್ಲೂಕಿನ ಕ್ಯಾದಿಗುಪ್ಪಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ಧಾರೆ.
ಇಲಕಲ್ ತಾಲ್ಲೂಕು ಕಂದಗಲ್ಲ ಗ್ರಾಮದ ನಿವೃತ್ತ ಶಿಕ್ಷಕ ಬಾಬು ಶಾಹುಸೇನ್ ಬಾಗವಾನ (61) ಮೃತರು.
ಕ್ಯಾದಿಗುಪ್ಪಾ ಚೆಕ್ಪೋಸ್ಟ್ ಬಳಿ ರಸ್ತೆ ವಿಭಜಕ ದಾಟುವ ವೇಳೆ ಇಲಕಲ್ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಬು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಕ್ಯಾದಿಗುಪ್ಪಾ ಗ್ರಾಮದ ಶರಣಪ್ಪ ಚಳಗೇರಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಇಲ್ಲಿಯ ಪೊಲೀಸರು ಕಾರು ಮತ್ತು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.