ADVERTISEMENT

ಕೋತಿಗಳಿಗೆ ಆಹಾರ ನೀಡಿದ ತಹಶೀಲ್ದಾರ್

​ಪ್ರಜಾವಾಣಿ ವಾರ್ತೆ
Published 12 ಮೇ 2021, 11:06 IST
Last Updated 12 ಮೇ 2021, 11:06 IST
ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಕೋತಿಗಳಿಗೆ ಕಂದಾಯ ಇಲಾಖೆ ಸಿಬ್ಬಂದಿ ಆಹಾರ ನೀಡಿದರು
ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ಕೋತಿಗಳಿಗೆ ಕಂದಾಯ ಇಲಾಖೆ ಸಿಬ್ಬಂದಿ ಆಹಾರ ನೀಡಿದರು   

ಗಂಗಾವತಿ: ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕೋತಿಗಳಿಗೆ ಕಂದಾಯ ಇಲಾಖೆ ಸಿಬ್ಬಂದಿ ಬುಧವಾರ ಆಹಾರ ನೀಡಿದರು.

ಸಾಮಾನ್ಯ ದಿನಗಳಲ್ಲಿ ಕೋತಿಗಳು ಇಲ್ಲಿಗೆ ಬರುವ ಪ್ರವಾಸಿಗರು ನೀಡುವ ಆಹಾರ ತಿನ್ನುತ್ತಿದ್ದವು. ಲಾಕ್‌ಡೌನ್‌ ಕಾರಣ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಪರದಾಡುತ್ತಿದ್ದವು. ತಹಶೀಲ್ದಾರ್ ನಾಗರಾಜ ನೇತೃತ್ವದ ತಂಡ ಆನೆಗೊಂದಿ ಸಮೀಪದ ಪಂಪಾ ಸರೋವರ ಹಾಗೂ ಅಂಜನಾದ್ರಿ ಪರ್ವತ ಸಮೀಪ ಇದ್ದ ಕೋತಿಗಳಿಗೆ ಬಾಳೆಹಣ್ಣು, ಶೇಂಗಾ ಬೀಜ ನೀಡಿತು.

ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಗ್ರಾಮ ಲೆಕ್ಕಾಧಿಕಾರಿ ಶರಣಪ್ಪ ಹಾಗೂ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.