ADVERTISEMENT

ಕೊಪ್ಪಳ: ದೇವಸ್ಥಾನದ ಹುಂಡಿ ಕಳ್ಳತನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 10:29 IST
Last Updated 18 ಸೆಪ್ಟೆಂಬರ್ 2020, 10:29 IST

ಕೊಪ್ಪಳ: ತಾಲೂಕಿನ ಹ್ಯಾಟಿ ಗ್ರಾಮದಲ್ಲಿರುವ ಹೊನ್ನಲಾಂಬಿಕಾ ದೇವಸ್ಥಾನದ ಹುಂಡಿಯನ್ನು ಗುರುವಾರ ರಾತ್ರಿ ಕಳವು ಮಾಡಲಾಗಿದೆ.ಹುಂಡಿ ಒಡೆದು ಅದರಲ್ಲಿನ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.

ಬೆಳಿಗ್ಗೆ ಗ್ರಾಮಸ್ಥರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಹುಂಡಿಯಲ್ಲಿ ಹತ್ತಾರು ಸಾವಿರ ರೂಪಾಯಿ ಸಂಗ್ರಹವಾಗಿತ್ತು ಎಂದು ಹೇಳಲಾಗುತ್ತಿದೆ.

ಒಂದು ವರ್ಷದ ಹಿಂದೆ ಇದೇ ದೇವಸ್ಥಾನದಲ್ಲಿ ಬೆಳ್ಳಿ ಮೂರ್ತಿ ಕಳುವಾಗಿತ್ತು. ಈಗ ಹುಂಡಿ ಕಳ್ಳತನ ಮಾಡಿ, ನಗ ನಾಣ್ಯ ದೋಚಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ADVERTISEMENT

ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಳ್ಳರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.