ADVERTISEMENT

ಸಾಮಾಜಿಕ ಕಳಕಳಿಯ ಪುಸ್ತಕ ಸಂಸಾರದಲ್ಲಿ ಸಾಮರಸ್ಯ: ತೋಂಟದ ಶ್ರೀ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 11:49 IST
Last Updated 5 ಆಗಸ್ಟ್ 2021, 11:49 IST
ಮೈಸೂರಿನ ಜಿಎಸ್‌ಎಸ್‌ ಕಾಲೇಜಿನಲ್ಲಿ ನಡೆದ ಗೊರುಚ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ, ಸಾಹಿತಿ ಜಿ.ಎಸ್‌.ಗೋನಾಳ ಅವರ 'ಸಂಸಾರದಲ್ಲಿ ಸಾಮರಸ್ಯ' ಕೃತಿಯನ್ನು ಗದುಗಿನ ತೋಂಟದಾರ್ಯಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಡಾ.ಗೊರುಚ ಮುಂತಾದವರು ಇದ್ದರು
ಮೈಸೂರಿನ ಜಿಎಸ್‌ಎಸ್‌ ಕಾಲೇಜಿನಲ್ಲಿ ನಡೆದ ಗೊರುಚ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಪ್ಪಳ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ, ಸಾಹಿತಿ ಜಿ.ಎಸ್‌.ಗೋನಾಳ ಅವರ 'ಸಂಸಾರದಲ್ಲಿ ಸಾಮರಸ್ಯ' ಕೃತಿಯನ್ನು ಗದುಗಿನ ತೋಂಟದಾರ್ಯಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಡಾ.ಗೊರುಚ ಮುಂತಾದವರು ಇದ್ದರು   

ಕೊಪ್ಪಳ: ಶರಣ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ, ಸಾಹಿತಿ ಜಿ.ಎಸ್‌.ಗೋನಾಳ ಅವರ 'ಸಂಸಾರದಲ್ಲಿ ಸಾಮರಸ್ಯ' ಕೃತಿಯನ್ನು ಗದುಗಿನ ತೋಂಟದಾರ್ಯಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಬಿಡುಗಡೆ ಮಾಡಿದರು.

ಮೈಸೂರಿನ ಜೆಎಸ್‌ಎಸ್‌ ಮಹಿಳಾ ಕಾಲೇಜಿನ ವನಜ್ಯೋತಿ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೊ.ರು.ಚ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಶ್ರೀಗಳು, 'ಪುಸ್ತಕಗಳು ಸಮಾಜದ ದಾರಿ ದೀಪ ಇದ್ದ ಹಾಗೆ’. ಗೋನಾಳರ ಕೃತಿ ನಾಗರಿಕ ಸಮಾಜಕ್ಕೆ ಅತ್ಯುತ್ತಮವಾದ ಕೈಗನ್ನಡಿಯಾಗಿದೆ' ಎಂದರು.

ಚಲನಚಿತ್ರ ನಟರಾದ ನಾಗರಾಜ ಮೂರ್ತಿ ಮಾತನಾಡಿ, ‘ಸಂಸಾರದಲ್ಲಿ ಸಾಮಾರಸ್ಯ’ ಪುಸ್ತಕವು ಪ್ರತಿಯೊಬ್ಬರೂ ಓದಲೇಬೇಕಾದ ಕೃತಿ. ಈ ಕೃತಿಯ ಆಶಯದಂತೆ ನಡೆದುಕೊಂಡಲ್ಲಿ ಸದಾ ಹಸನ್ಮುಖಿಯಾಗಿರಲು ಸಾಧ್ಯವಿದೆ‘ ಎಂದರು.

ADVERTISEMENT

ಪರಿಷತ್ ಗೌರವಾಧ್ಯಕ್ಷಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ರಾಜ್ಯ ಘಟಕದ ಅಧ್ಯಕ್ಷ ಡಾ.ಗೊ.ರು.ಚನ್ನಬಸಪ್ಪ, ಉಪಾಧ್ಯಕ್ಷ ಕೊಂಡಜ್ಜಿ ಬ.ಷಣ್ಮೂಖಪ್ಪ, ಡಾ.ಸಿ.ರಾ.ವನ್ನಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ಬಿ.ಅಂಗಡಿ, ಕಾರ್ಯದರ್ಶಿ ಶ್ರೀಶೈಲ ಪಟ್ಟಣಶೆಟ್ಟಿ, ಕೋಶಾಧ್ಯಕ್ಷ ಎಸ್.ಎಂ.ಹಂಪಯ್ಯ, ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ, ಕದಳಿ ವೇದಿಕೆ ಗಣ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.