ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್ಗೆ ಜಿದ್ದಾಜಿದ್ದಿ ನಡೆದಿರುವ ಸಮಯದಲ್ಲಿಯೇ ಪಕ್ಷದ ಕೆಲ ಕಾರ್ಯಕರ್ತರು ’ಮುಂದಿನ ಎಂಎಲ್ಎ ಸಂಗಣ್ಣ ಅವರಿಗೆ ಜಯವಾಗಲಿ’ ಎನ್ನುವ ಘೋಷಣೆಗಳನ್ನು ಮೊಳಗಿಸಿದರು. ವೇದಿಕೆ ಕಾರ್ಯಕ್ರಮದ ಸಮಯದಲ್ಲಿಯೂ ಇದು ಮುಂದುವರಿಯಿತು. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಭಾಷಣದಲ್ಲಿ ಸಂಗಣ್ಣ ಅವರ ಕೆಲಸಗಳನ್ನು ಪ್ರಧಾನವಾಗಿ ಉಲ್ಲೇಖಿಸಿದರು.
‘ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ಆದರೆ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ. ಸಿದ್ದರಾಮಯ್ಯ ಅವರನ್ನು ಹರಕೆಯ ಕುರಿ ಮಾಡಲಾಗುತ್ತದೆ’ ಎಂದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.