ADVERTISEMENT

ಶರಣಪ್ಪ ತಳ್ಳಿಗೆ ನಾಡೋಜ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 12:28 IST
Last Updated 4 ಜನವರಿ 2021, 12:28 IST
ಧಾರವಾಡದಲ್ಲಿ ಭಾನುವಾರ ನಡೆದ ಧಾರವಾಡ ಕೇಂದ್ರ ಕನ್ನಡ ಸಾಹಿತ್ಯ ಕಾರ್ಯಕ್ರಮದಲ್ಲಿ ಗಂಗಾವತಿಯ ಸಾಹಿತಿ ಶರಣಪ್ಪ ತಳ್ಳಿ ಅವರಿಗೆ ನಾಡೋಜ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಧಾರವಾಡದಲ್ಲಿ ಭಾನುವಾರ ನಡೆದ ಧಾರವಾಡ ಕೇಂದ್ರ ಕನ್ನಡ ಸಾಹಿತ್ಯ ಕಾರ್ಯಕ್ರಮದಲ್ಲಿ ಗಂಗಾವತಿಯ ಸಾಹಿತಿ ಶರಣಪ್ಪ ತಳ್ಳಿ ಅವರಿಗೆ ನಾಡೋಜ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು   

ಗಂಗಾವತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಹಾಗೂ ಸಾಹಿತಿ ಶರಣಪ್ಪ ತಳ್ಳಿಯವರಿಗೆ 2020ನೇ ಸಾಲಿನ ‘ನಾಡೋಜ ಚೆನ್ನವೀರ ಕಣವಿ ಕಾವ್ಯ ಪ್ರಶಸ್ತಿ’ಯನ್ನು ಧಾರವಾಡದಲ್ಲಿ ಭಾನುವಾರ ಪ್ರದಾನ ಮಾಡಲಾಯಿತು.

ಧಾರವಾಡ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾಹಿತಿ ರಂಜಾನ್ ದರ್ಗಾರವರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದ ಶರಣಪ್ಪ ತಳ್ಳಿಯವರಿಗೆ ಗಂಗಾವತಿಯ ಕಾವ್ಯ ಕಲರವದ ಸಾಹಿತಿ ಮಿತ್ರರು ಶುಭಕೋರಿದ್ದು, ಅವರ ಸಾಹಿತ್ಯ ಸೇವೆ ಸದಾ ನಿರಂತರವಾಗಿರಲೆಂದು ಹಾರೈಸಿದ್ದಾರೆ.

ವೇದಿಕೆಯಲ್ಲಿ ಸಾಹಿತಿಗಳಾದ ಡಾ.ಎಸ್.ಆರ್ ಗುಂಜಾಳ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ರಾಜ್ಯಾಧ್ಯಕ್ಷ ಕೊಟ್ರೇಶ ಉಪ್ಪಾರ, ಸಮುದ್ರವಳ್ಳಿ ವಾಸು, ಜೆ ಜೆ ನರಸಿಂಹ ಮೂರ್ತಿ ಸೇರಿದಂತೆ ಹಲವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.