ADVERTISEMENT

ಅಪಘಾತ: ತಂದೆ, ಮಗ ಸಾವು

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 1:52 IST
Last Updated 19 ಜನವರಿ 2021, 1:52 IST

ಗಂಗಾವತಿ: ತಾಲ್ಲೂಕಿನ ಜಂಗಮರ ಕಲ್ಗುಡಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎನ್ಇಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ತಂದೆ-ಮಗ ಸಾವನ್ನಪ್ಪಿದ್ದಾರೆ.

ಗಂಗಾವತಿಯ ಜಯನಗರದ ಹನುಮಂತಪ್ಪ (38), ಪುತ್ರ ಪ್ರವೀಣ(4) ಮೃತಪಟ್ಟಿದ್ದಾರೆ.

ಗಂಗಾವತಿ ಮಾರ್ಗವಾಗಿ ಸಿಂಧನೂರಿಗೆ ತೆರಳುತ್ತಿದ್ದ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಕೃಷ್ಣೇಗೌಡ ಮತ್ತು ನಿರ್ವಾಹಕ ಉಮೇಶ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.