ADVERTISEMENT

ಕುಕನೂರು: ಸಿಡಿಲು ಬಡಿದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2021, 11:07 IST
Last Updated 24 ಅಕ್ಟೋಬರ್ 2021, 11:07 IST
ಕುಕನೂರು ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದ ಸಿಡಿಲು ಬಡಿದ ವ್ಯಕ್ತಿಯ ಸಂಬಂಧಿಕರಿಗೆ ಸಚಿವ ಹಾಲಪ್ಪ ಆಚಾರ್ ಅವರು ₹ 5 ಲಕ್ಷ ಚೆಕ್ ವಿತರಿಸಿದರು
ಕುಕನೂರು ತಾಲ್ಲೂಕಿನ ಕುದರಿಮೋತಿ ಗ್ರಾಮದಲ್ಲಿ ಶನಿವಾರ ಸಂಜೆ ಸಂಭವಿಸಿದ ಸಿಡಿಲು ಬಡಿದ ವ್ಯಕ್ತಿಯ ಸಂಬಂಧಿಕರಿಗೆ ಸಚಿವ ಹಾಲಪ್ಪ ಆಚಾರ್ ಅವರು ₹ 5 ಲಕ್ಷ ಚೆಕ್ ವಿತರಿಸಿದರು   

ಕುಕನೂರು: ತಾಲ್ಲೂಕಿನ ಕುದುರಿಮೋತಿ ಗ್ರಾಮದ ಲಾಡಿನ್ ಸಾಬ್ ಮಾಬುಸಾಬ್ ಮಕಾಂದಾರ್ (28) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ತೆರಳಿ ಮೃತ ಲಾಡಿನ್ ಸಾಬ್ ಸಂಬಂಧಿಕರಿಗೆ ಸಮಾಧಾನ ಪಡಿಸಿದರು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ₹ 5 ಲಕ್ಷ ಚೆಕ್ ವಿತರಿಸಿದರು.

ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್, ಹೇಮಂತರಾಜ್ ಮತ್ತು ಪಿಎಸ್‌ಐ ವೆಂಕಟೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.