ADVERTISEMENT

ಕೊಪ್ಪಳ: ಜಿಲ್ಲಾಧಿಕಾರಿಯಾಗಿ ಸುಂದರೇಶ ಬಾಬು ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2022, 6:20 IST
Last Updated 20 ಜುಲೈ 2022, 6:20 IST
ಸುಂದರೇಶ ಬಾಬು ಅವರಿಗೆ ಸುರಳ್ಕರ್ ಅಧಿಕಾರ ಹಸ್ತಾಂತರಿಸಿದರು.  
ಸುಂದರೇಶ ಬಾಬು ಅವರಿಗೆ ಸುರಳ್ಕರ್ ಅಧಿಕಾರ ಹಸ್ತಾಂತರಿಸಿದರು.     

ಕೊಪ್ಪಳ: ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಸುಂದರೇಶ ಬಾಬು ಎಂ. ಬುಧವಾರ ಅಧಿಕಾರ ವಹಿಸಿಕೊಂಡರು.

ಮೊದಲು ಜಿಲ್ಲಾಧಿಕಾರಿಯಾಗಿದ್ದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಕೆ.ಪಿ.ಎಸ್.ಸಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದಾರೆ.

ಸುಂದರೇಶ ಬಾಬು ಅವರಿಗೆಸುರಳ್ಕರ್ ಅಧಿಕಾರ ಹಸ್ತಾಂತರಿಸಿದರು.

ADVERTISEMENT

2012ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಸುಂದರೇಶಬಾಬು ಮೂಲತಃ ತಮಿಳುನಾಡಿನವರು. ಮಧುರೈ ಕೃಷಿ ವಿಶ್ವವಿದ್ಯಾಲಯದಿಂದ 2004ರಲ್ಲಿ ಬಿ.ಎಸ್ಸಿ ಪದವಿ ಪೂರ್ಣಗೊಳಿಸಿ, ಕೆಲಕಾಲ ಕೆನರಾ ಬ್ಯಾಂಕ್ ಅಧಿಕಾರಿಯಾಗಿ ಸೇವೆ ನಿರ್ವಹಿಸಿದ್ದರು. 2012 ರ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು. ಬಳಿಕ ಧಾರವಾಡ ಉಪವಿಭಾಗಾಧಿಕಾರಿಯಾಗಿ, ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಗದಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.