ADVERTISEMENT

ಬಸ್‌ ನಿಲ್ದಾಣ ಸ್ವಚ್ಛಗೊಳಿಸಿದ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 11:42 IST
Last Updated 20 ಜೂನ್ 2021, 11:42 IST
ತಾವರಗೇರಾ ಪಟ್ಟಣದಲ್ಲಿ ಬಸ್‌ ನಿಲ್ದಾಣ ಸ್ವಚ್ಛ ಮಾಡಲಾಯಿತು
ತಾವರಗೇರಾ ಪಟ್ಟಣದಲ್ಲಿ ಬಸ್‌ ನಿಲ್ದಾಣ ಸ್ವಚ್ಛ ಮಾಡಲಾಯಿತು   

ತಾವರಗೇರಾ: ಸೋಮವಾರದಿಂದ ಬಸ್‌ ಸಂಚಾರ ಆರಂಭವಾಗಲಿದ್ದು, ಸಂಚಾರ ನಿಯಂತ್ರಣಾಧಿಕಾರಿ ಮಹಾಂತೇಶ ಅವರು ಭಾನುವಾರ ಸ್ಥಳೀಯರ ನೆರವಿನಿಂದ ಬಸ್‌ ನಿಲ್ದಾಣ ಸ್ವಚ್ಛಗೊಳಿಸಿದರು.

ಮಹಾಂತೇಶ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್ ಘೋಷಣೆಯಾದ ಬಳಿಕ ಬಸ್‌ ನಿಲ್ದಾಣ ಬಂದ್ ಮಾಡಲಾಗಿತ್ತು. ಸ್ವಚ್ಛತೆ ಮರೀಚಿಕೆಯಾಗಿತ್ತು. ಇದನ್ನು ಗಮನಿಸಿದ ನಿಯಂತ್ರಣಾಧಿಕಾರಿ ಮಹಾಂತೇಶ ಭಾನುವಾರ ಬೆಳಿಗ್ಗೆ ಶ್ರಮದಾನ ಮಾಡಿದರು.

ADVERTISEMENT

ಸ್ಥಳೀಯರಾದ ಮಹಿಬೂಬ ಕೂಲಿ, ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಆಟೊ ಚಾಲಕರ ಸಂಘದ ಅಧ್ಯಕ್ಷ್ಷ ಗರೀಬ್‍ಪಾಷಾ ಕೂಲಿ, ಶ್ಯಾಮರಾಜ ಕಲಾಲ, ಶರಣೆಗೌಡ, ಬಾಜಾಖಾನ, ಬಸವರಾಜ ಕುಂಬಾರ ಅವರು ಕೈಜೋಡಿಸಿದರು. ಕಸಗುಡಿಸಿ, ಟ್ಯಾಂಕರ್ ನೀರು ಹಾಕಿ, ಇಡೀ ಆವರಣ ಸ್ವಚ್ಛ ಮಾಡಲಾಯಿತು.

‘ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೆಚ್ಚು ಕಸ ಸಂಗ್ರಹವಾಗಿತ್ತು. ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿತ್ತು. ಪ್ರಯಾಣಿಕರ ಆಸನಗಳ ಮೇಲೆ ಉಗುಳಲಾಗಿತ್ತು. ಅದನ್ನು ಸ್ವಚ್ಛ ಮಾಡಲಾಯಿತು’ ಎಂದು ಹೇಳಿದರು.

‘ಸೋಮವಾರ ಬಸ್‌ ಸಂಚಾರ ಆರಂಭಿಸಲು ಸರ್ಕಾರ ಅವಕಾಶ ನೀಡಿದೆ. ಮಾರ್ಗಸೂಚಿ ಪಾಲಿಸುವ ಮೂಲಕ ಆರಂಭಿಸಲಾಗುವುದು’ ಎಂದು ನಿಯಂತ್ರಣಾಧಿಕಾರಿ ಮಹಾಂತೇಶ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.