ADVERTISEMENT

ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರ ಸಾವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 13:38 IST
Last Updated 3 ಜುಲೈ 2021, 13:38 IST

ಕನಕಗಿರಿ: ಕೃಷಿಹೊಂಡದಲ್ಲಿ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಸಮೀಪದ ವರ್ನಖೇಡ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಹುಲಿಹೈದರ ಗ್ರಾಮದ ಕವಿತಾ (11) ಹಾಗೂ ಆಗೋಲಿ ಗ್ರಾಮದ ಸಂಜನಾ (9) ಮೃತಪಟ್ಟವರು.

ಬಾಲಕಿಯರ ಪೋಷಕರು ಗ್ರಾಮದ ತೋಟದಲ್ಲಿ ಕೂಲಿಕಾರರಾಗಿ ಕೆಲಸ ಮಾಡುತ್ತಿದ್ದರು. ಶಾಲೆ ಇಲ್ಲದ ಕಾರಣ ಇಬ್ಬರು ಬಾಲಕಿಯರು ಪೋಷಕರ ಹತ್ತಿರ ಬಂದಿದ್ದರು. ಈ ವೇಳೆ ಸ್ನಾನ ಮಾಡಲು ತೆರಳಿದ್ದಾಗ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕೃಷಿಹೊಂಡದಿಂದ ಶವಗಳನ್ನು ತೆಗೆಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲು ಮುಟ್ಟಿತು. ಗಂಗಾವತಿ ಗ್ರಾಮೀಣ ವಿಭಾಗದ ಸಿಪಿಐ ಉದಯರವಿ ಹಾಗೂ ಪಿಎಸ್ಐ ತಾರಾಬಾಯಿ ಪವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.