ADVERTISEMENT

ವಾಲ್ಮೀಕಿ ರಾಮಾಯಣ ಶ್ರೇಷ್ಠ ಗ್ರಂಥ :ಚಂದಪ್ಪ ತಳವಾರ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 13:40 IST
Last Updated 24 ಡಿಸೆಂಬರ್ 2019, 13:40 IST
ಹನುಮಸಾಗರ ಸಮೀಪದ ಯರಗೇರಾ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ವೃತ್ತವನ್ನು ಮುಖಂಡ ಚಂದಪ್ಪ ತಳವಾರ ಉದ್ಘಾಟಿಸಿದರು
ಹನುಮಸಾಗರ ಸಮೀಪದ ಯರಗೇರಾ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ವೃತ್ತವನ್ನು ಮುಖಂಡ ಚಂದಪ್ಪ ತಳವಾರ ಉದ್ಘಾಟಿಸಿದರು   

ಹನುಮಸಾಗರ: ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ವಿಶ್ವಕ್ಕೆ ಶ್ರೇಷ್ಠವಾದದ್ದು ಎಂದು ಮುಖಂಡ ಚಂದಪ್ಪ ತಳವಾರ ಹೇಳಿದರು.

ಸಮೀಪದ ಯರಗೇರಾ ಗ್ರಾಮದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟಿಸಿ ಅವರು ಮಾತನಾಡಿದರು.

ರಾಮಾಯಣ ರಚಿಸುವ ಮೂಲಕ ವಾಲ್ಮೀಕಿ ವಿಶ್ವಕ್ಕೆ ಸಂಸ್ಕೃತಿಯನ್ನು ಕಲಿಸಿಕೊಟ್ಟಿದ್ದಾರೆ. ಅವರು ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ. ಎಲ್ಲರೂ ವಾಲ್ಮೀಕಿಯ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಸಮಾಜ ಮುಂದೆ ಬರಲು ಎಲ್ಲರೂ ಶಿಕ್ಷಣವಂತರಾಗಬೇಕು ಎಂದರು.

ADVERTISEMENT

ಗ್ರಾಪಂ ಅಧ್ಯಕ್ಷ ದೇವಪ್ಪ ಹನುಮಸಾಗರ, ಮುಖಂಡರಾದ ಶರಣಯ್ಯ ಹಿರೇಮಠ, ಶಿವಪ್ಪ ತಳಗಡೆ, ಮುತ್ತಪ್ಪ ತಳವಾರ, ಧರ್ಮಣ್ಣಾ ಗಡಾದ, ವೆಂಕಟಪತಿ ಈಳಗೇರ, ಈರಣ್ಣ ಸೂಡಿ, ಬಸವರಾಜ ಶೆಟ್ಟರ್‌ ಹಾಗೂ ವಿ.ಬಿ.ಗೌಡರ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.