ADVERTISEMENT

ಗಂಗಾವತಿಯಲ್ಲಿ ಚಿರತೆ ದಾಳಿ: ಮಹಿಳೆಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 2:43 IST
Last Updated 10 ಅಕ್ಟೋಬರ್ 2020, 2:43 IST
ಗಂಗಾವತಿ ತಾಲ್ಲೂಕಿನ ಜಂಗ್ಲಿ ರಂಗಾಪುರದಲ್ಲಿ ದನಕಾಯಲು ತೆರಳಿದ್ದಾಗ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಈ ವೇಳೆ ಶಾಸಕ ಪರಣ್ಣ ಮುನವಳ್ಳಿ ಇದ್ದರು
ಗಂಗಾವತಿ ತಾಲ್ಲೂಕಿನ ಜಂಗ್ಲಿ ರಂಗಾಪುರದಲ್ಲಿ ದನಕಾಯಲು ತೆರಳಿದ್ದಾಗ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಈ ವೇಳೆ ಶಾಸಕ ಪರಣ್ಣ ಮುನವಳ್ಳಿ ಇದ್ದರು   

ಗಂಗಾವತಿ:ಜಾನುವಾರು ಮೇಯಿಸಲು ತೆರಳಿದ್ದ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಜಂಗ್ಲಿ ರಂಗಾಪುರ ಗ್ರಾಮದ ಮಾಬಮ್ಮ (55) ಗಾಯಗೊಂಡವರು.

ಮಾಬಮ್ಮ ಅವರ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ. ಜನರ ಚೀರಾಟದಿಂದ ಚಿರತೆ
ಓಡಿ ಹೋಗಿದೆ.

ADVERTISEMENT

ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಶಾಸಕ ಪರಣ್ಣ ಮುನವಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.