ಗಂಗಾವತಿ:ಜಾನುವಾರು ಮೇಯಿಸಲು ತೆರಳಿದ್ದ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಜಂಗ್ಲಿ ರಂಗಾಪುರ ಗ್ರಾಮದ ಮಾಬಮ್ಮ (55) ಗಾಯಗೊಂಡವರು.
ಮಾಬಮ್ಮ ಅವರ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ. ಜನರ ಚೀರಾಟದಿಂದ ಚಿರತೆ
ಓಡಿ ಹೋಗಿದೆ.
ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಶಾಸಕ ಪರಣ್ಣ ಮುನವಳ್ಳಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ವಿಚಾರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.