ಕಾರಟಗಿ: ‘ಶಾಸಕ ಬಸವರಾಜ ದಢೇಸುಗೂರ ಮತ್ತು ಅವರ ಬೆಂಬಲಿಗರು ನನಗೆ ಕಿರುಕುಳ ನೀಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ’ ಎಂದು ಮಹಿಳಾ ಅಧಿಕಾರಿಯೊಬ್ಬರು ಮಂಗಳವಾರ ದೂರಿದರು.
ಶಾಸಕರನ್ನು ಭೇಟಿಯಾಗಲು ಅವರ ನಿವಾಸಕ್ಕೆ ತೆರಳಿದ್ದ ಅಧಿಕಾರಿಯು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಿರುಕುಳದಿಂದ ಸಾಕಷ್ಟು ಮನನೊಂದಿದ್ದೇನೆ.ಇಲ್ಲಿ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ವರ್ಗಾವಣೆ ಬಯಸಿರುವೆ’ ಎಂದರು.
‘ದೂರು ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಮೂರು ಬಾರಿ ಭೇಟಿಯಾಗಲು ಪ್ರಯತ್ನಿಸಿದರೂ ಅವರು ಲಭ್ಯವಾಗಿಲ್ಲ. ಶಾಸಕರೂ ಸಿಕ್ಕಿಲ್ಲ’ ಎಂದು ಅವರು ತಿಳಿಸಿದರು.
‘ಸಾಮಾಜಿಕ ಜಾಲತಾಣಗಳಲ್ಲಿ ಮಹಿಳಾ ಅಧಿಕಾರಿಯ ಅಪಪ್ರಚಾರಕ್ಕೆ ನಾನು ಕುಮ್ಮಕ್ಕು ನೀಡಿಲ್ಲ. ಇದೀಗ ಗಮನಕ್ಕೆ ಬಂದಿದ್ದು, ಅಧಿಕಾರಿ ಜೊತೆ ಚರ್ಚಿಸಿ ಸಮಸ್ಯೆ ಪರಿಹರಿಸುವೆ’ ಎಂದು ಶಾಸಕ ಬಸವರಾಜ ದಢೇಸುಗೂರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.