ADVERTISEMENT

ಪುಷ್ಕರ ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 11:12 IST
Last Updated 25 ನವೆಂಬರ್ 2020, 11:12 IST
ಮೃತ ಯುವಕ ಸಾಯಿಚರಣ್
ಮೃತ ಯುವಕ ಸಾಯಿಚರಣ್    

ಗಂಗಾವತಿ: ತುಂಗಭದ್ರಾ ಪುಷ್ಕರ ಸ್ನಾನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಬುಧವಾರ ನಡೆದಿದೆ.

ತಾಲ್ಲೂಕಿನ ಬರಗೂರು ಕ್ಯಾಂಪಿನ ಸಾಯಿಚರಣ್ (21) ಮೃತಪಟ್ಟ ಯುವಕ. ಪವಿತ್ರ ಪುಷ್ಕರ ಸ್ನಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದಾಗ ನೀರಿನಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ ಎಂದು ಗ್ರಾಮೀಣಾ ಠಾಣಾ ಪಿಎಸ್ಐ ದೊಡ್ಡಪ್ಪ ತಿಳಿಸಿದ್ದಾರೆ.

ಈ ಕುರಿತು ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.