ADVERTISEMENT

ವಿದ್ಯುತ್ ತಂತಿ ತಗುಲಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2020, 15:10 IST
Last Updated 26 ಡಿಸೆಂಬರ್ 2020, 15:10 IST

ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್‌ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್‌ ತಂತಿ ತಗುಲಿ ಯುವಕ ಮೃತಪಟ್ಟಿದ್ದಾನೆ. ಇನ್ನೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಚಿಕ್ಕಬೆಣಕಲ್‌ ಗ್ರಾಮದ ಬೆಟದಪ್ಪ (33) ಮೃತ ಯುವಕ. ಹನುಮಂತಪ್ಪ (40) ಗಾಯಗೊಂಡವರು.

ಗಾಯಗೊಂಡ ಯುವಕನಿಗೆ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ADVERTISEMENT

ಮೃತ ಯುವಕನ ಸಹೋದರ ಲಿಂಗರಾಜ ಅವರು ಜಮೀನಿನ ಮಾಲೀಕರ ವಿರುದ್ಧ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.