ADVERTISEMENT

ಇಂದಿರಾ ಕ್ಯಾಂಟೀನ್‍ಗೆ ಡಿ.ಸಿ ಭೇಟಿ: ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 9:42 IST
Last Updated 17 ಮಾರ್ಚ್ 2018, 9:42 IST
ಮಂಡ್ಯದ ಡಿಎಚ್‌ಒ ಕಚೇರಿ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಉಪಾಹಾರ ಸೇವಿಸಿದರು
ಮಂಡ್ಯದ ಡಿಎಚ್‌ಒ ಕಚೇರಿ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಉಪಾಹಾರ ಸೇವಿಸಿದರು   

ಮಂಡ್ಯ: ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಿಮೆ ಆಹಾರ ಸರಬರಾಜು ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರಿಂದ ದೂರುಬಂದ ಕಾರಣ ಜಿಲ್ಲಾಧಿಕಾರಿಗಳು ದೀಢೀರ್‌ ಭೇಟಿ ನೀಡಿದರು. ಇಂದಿರಾ ಕ್ಯಾಂಟೀನ್‍ನಲ್ಲಿ ತಯಾರಿಸಲಾದ ಉಪಾಹಾರವನ್ನು ಅವರು ಈ ಸಂದರ್ಭದಲ್ಲಿ ಸೇವಿಸಿದರು.

ಬಡವರಿಗೆಕೈ ಗೆಟಕುವ ದರದಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶ ನೀಡದೆ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡಬೇಕು. ಜೊತೆಗೆ ಸಿಬ್ಬಂದಿ ಕ್ಯಾಂಟೀನ್‌ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ADVERTISEMENT

ನಗರಸಭೆ ಎಂಜಿನಿಯರ್‌ ಪ್ರತಾಪ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.