ADVERTISEMENT

ಕಾಂಗ್ರೆಸ್ ಬಲವರ್ಧನೆಗೆ ಮುನ್ನುಡಿ

ಶ್ರೀರಂಗಪಟ್ಟಣದಲ್ಲಿ ‘ಯುವದೃಷ್ಟಿ– 2014’ ಕಾರ್ಯಾಗಾರ ಆರಂಭ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2014, 5:53 IST
Last Updated 11 ಫೆಬ್ರುವರಿ 2014, 5:53 IST
ಶ್ರೀರಂಗಪಟ್ಟಣ ಹೊರವಲಯದಲ್ಲಿ ಸೋಮವಾರದಿಂದ ಆರಂಭವಾದ ಕಾಂಗ್ರೆಸ್‌ನ ‘ಯುವದೃಷ್ಟಿ–2014’ ಕಾರ್ಯಾಗಾರದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್‌ ಮಾತನಾಡಿದರು. ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ರಿಜ್ವಾನ್‌ ಅರ್ಷದ್‌, ಪ್ರಧಾನ ಕಾರ್ಯದರ್ಶಿ ನಟರಾಜ್‌ ಇದ್ದಾರೆ.
ಶ್ರೀರಂಗಪಟ್ಟಣ ಹೊರವಲಯದಲ್ಲಿ ಸೋಮವಾರದಿಂದ ಆರಂಭವಾದ ಕಾಂಗ್ರೆಸ್‌ನ ‘ಯುವದೃಷ್ಟಿ–2014’ ಕಾರ್ಯಾಗಾರದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್‌ ಮಾತನಾಡಿದರು. ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ರಿಜ್ವಾನ್‌ ಅರ್ಷದ್‌, ಪ್ರಧಾನ ಕಾರ್ಯದರ್ಶಿ ನಟರಾಜ್‌ ಇದ್ದಾರೆ.   

ಶ್ರೀರಂಗಪಟ್ಟಣ: ರಾಜ್ಯ ಯುವ ಕಾಂಗ್ರೆಸ್‌ನ 3 ದಿನಗಳ ‘ಯುವದೃಷ್ಟಿ–2014’ ಖಾಸಗಿ ರೆಸಾರ್ಟ್‌ನಲ್ಲಿ ಸೋಮವಾರದಿಂದ ಶುರುವಾಗಿದೆ.

ಯುವ ಕಾಂಗ್ರೆಸ್‌ನ ರಾಜ್ಯ ಸಮಿತಿ, ಲೋಕಸಭಾ ಕ್ಷೇತ್ರ ಹಾಗೂ ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳಿಗಾಗಿ ಏರ್ಪಡಿಸಿರುವ ಕಾರ್ಯಾಗಾರ ರಾಜ್ಯಾಧ್ಯಕ್ಷ ರಿಜ್ವಾನ್‌ ಅರ್ಷದ್‌ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

ರಾಜ್ಯ ಸಮಿತಿಯ 29 ಪದಾಧಿಕಾರಿಗಳು, ಲೋಕಸಭಾ ಕ್ಷೇತ್ರಗಳ 189 ಪದಾಧಿಕಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳ 209 ಪದಾಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.

‘ಪಕ್ಷ ಸಂಘಟನೆ, ನಾಯಕತ್ವ ಗುಣ, ಹೊಂದಾಣಿಕೆಯ ಗುಣ ಬೆಳೆಸುವ ಕುರಿತು ಕಾರ್ಯಾಗಾರದಲ್ಲಿ ಯುವ ಸಾರಥಿಗಳಿಗೆ ತರಬೇತಿ ನೀಡಲಾಗುತ್ತದೆ’ ಎಂದು ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿನಟರಾಜ್‌ ತಿಳಿಸಿದ್ದಾರೆ.

ಯುವ ಕಾಂಗ್ರೆಸ್‌ ಪದಾಧಿಕಾರಿಗಳಿಗೆ ತರಬೇತಿ ನೀಡಲು ನವದೆಹಲಿಯ ಜವಾಹರಲಾಲ್‌ ನೆಹರು ಲೀಡರ್‌ಶಿಪ್‌ ಡೆವಲಪ್‌ಮೆಂಟ್‌ ಇನ್‌್ಸಸ್ಟಿಟ್ಯೂಟ್‌ನ 20 ಮಂದಿ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಕಾರ್ಯಾಗಾರದಲ್ಲಿ ಪಾಲ್ಗೊಂಡು ಕಾಂಗ್ರೆಸ್‌ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸಲಹೆ ನೀಡಿರುವುದಾಗಿ ತಿಳಿದು ಬಂದಿದೆ.

ರಾಜ್ಯ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷ ವರುಣ್‌, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ಜಿಲ್ಲಾಧ್ಯಕ್ಷ ಎಂ.ಆರ್‌. ಯತಿರಾಜ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತೇಜಸ್ವಿನಿಗೌಡ ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.