ADVERTISEMENT

ಗ್ರಾ.ಪಂ. ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 8:55 IST
Last Updated 16 ಸೆಪ್ಟೆಂಬರ್ 2011, 8:55 IST

ಮದ್ದೂರು: ಪರಿಷ್ಕೃತ ವೇತನ ಬಿಡುಗಡೆಗೆ ಆಗ್ರಹಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಗುರುವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಪರಿಷ್ಕೃತ ವೇತನ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ ನೀಡಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ವೇತನ ಬಿಡುಗಡೆಗೆ ಗ್ರಾ.ಪಂ. ಗಳು ಮುಂದಾಗಿಲ್ಲ. ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ದೂರಿದ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಓಗಳ ವಿರುದ್ಧ ಘೋಷಣೆ ಕೂಗಿದರು.

ಗ್ರಾ.ಪಂ. ಸಿಬ್ಬಂದಿಗೆ ಪ್ರತ್ಯೇಕ ಖಾತೆ ತೆರೆದು ವೇತನ ನೀಡಬೇಕು. ನಿಗದಿ ಮಾಡಿರುವ ತುಟ್ಟಿಭತ್ಯೆಯನ್ನು ಶೀಘ್ರ ಬಿಡುಗಡೆಗೊಳಿಸಬೇಕು. ಕನಿಷ್ಠ ವೇತನ ನಿಗದಿ ಸೇರಿದಂತೆ ಗ್ರಾ.ಪಂ. ನೌಕರರನ್ನು ಕಾಯಂಗೊಳಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಜಿ.ರಾಮಕೃಷ್ಣ, ಉಪಾಧ್ಯಕ್ಷರಾದ ಸಿದ್ದೇಗೌಡ, ಅನಿತಾ, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿವರಾಂ, ಕಾರ್ಯದರ್ಶಿ ಜಿ.ಆರ್.ರಾಮು, ಸದಸ್ಯರಾದ ಅನಿಲ್‌ಕುಮಾರ್, ಶಿವಕುಮಾರ್, ಜಯರಾಂ, ಸುರೇಶ್, ಜಿಲ್ಲಾ ಸಂಘದ ರಾಜಣ್ಣ, ಸಿ.ಕೃಷ್ಣ, ಉಷಾ, ನಿರ್ಮಲ, ಪವಿತ್ರ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.