ADVERTISEMENT

ಜಾತಿ ಪ್ರಸ್ತಾಪ: ಶಿವರಾಮೇಗೌಡ ವಿರುದ್ಧ ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2019, 12:57 IST
Last Updated 4 ಏಪ್ರಿಲ್ 2019, 12:57 IST
ಎಲ್‌.ಆರ್‌.ಶಿವರಾಮೇಗೌಡ
ಎಲ್‌.ಆರ್‌.ಶಿವರಾಮೇಗೌಡ    

ಮಂಡ್ಯ: ಸುಮಲತಾ, ರಾಕ್‌ಲೈನ್‌ ವೆಂಕಟೇಶ್‌, ದರ್ಶನ್‌ ಅವರ ಜಾತಿ ಪ್ರಸ್ತಾಪ ಮಾಡಿರುವ ಸಂಸದ ಎಲ್‌.ಆರ್‌.ಶಿವರಾಮೇಗೌಡ ವಿರುದ್ಧ ನಾಗಮಂಗಲ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಶಿವರಾಮೇಗೌಡರ ವಿರುದ್ಧ ಕಾಂಗ್ರೆಸ್‌ ಜಿಲ್ಲಾ ಘಟಕದ ಕಾರ್ಯದರ್ಶಿ ಕಬ್ಬಾಳಯ್ಯ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದ್ದರು. ಚುನಾವಣಾಧಿಕಾರಿ ಸೂಚನೆ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ಜನಪ್ರತಿನಿಧಿ ಕಾಯ್ದೆ ಕಲಂ 125ರ ಅನ್ವರ ಪ್ರಕರಣ ದಾಖಲಾಗಿದೆ.

‘ಸುಮಲತಾ ಮಂಡ್ಯ ಗೌಡ್ತಿ ಅಲ್ಲ, ನಾಯ್ಡು ಜನಾಂಗದವರು. ಕಾಕ್‌ಲೈನ್‌ ವೆಂಕಟೇಶ್‌, ದರ್ಶನ್‌ ಕೂಡ ನಾಯ್ಡು ಜನಾಂಗದವರು. ಇವರು ಮಂಡ್ಯವನ್ನು ನಾಯ್ಡುಮಯಗೊಳಿಸಿಲು ಹೊರಟಿದ್ದಾರೆ’ ಎಂದು ಶಿವರಾಮೇಗೌಡ ಆರೋಪಿಸಿದ್ದರು.

ADVERTISEMENT

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.