ADVERTISEMENT

ಜಾತ್ರೆಗಳು ಸಂಸ್ಕೃತಿಯ ಪ್ರತೀಕ: ದಾಸೇಗೌಡ

​ಪ್ರಜಾವಾಣಿ ವಾರ್ತೆ
Published 23 ಜನವರಿ 2012, 6:35 IST
Last Updated 23 ಜನವರಿ 2012, 6:35 IST

ಮದ್ದೂರು: ಹಬ್ಬ ಹಾಗೂ ಜಾತ್ರೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು, ಜನರ ನಡುವೆ ಬಾಂಧವ್ಯ ಹಾಗೂ ಸ್ನೇಹ ವೃದ್ಧಿಗೆ ಸಂಪರ್ಕ ಸೇತುವೆ ಯಾಗಿದೆ ಎಂದು ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕೆಸ್ತೂರು ದಾಸೇಗೌಡ ಅಭಿಪ್ರಾಯಪಟ್ಟರು.

ಸಮೀಪದ ಚಿಕ್ಕಂಕನಹಳ್ಳಿ ನಂದಿ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಉಚಿತ ಅನ್ನಸಂತರ್ಪಣೆ ಕಾರ್ಯಕ್ರಮದ ಆಯೋಜಕರಾದ ವಿಶ್ವ ಒಕ್ಕಲಿಗರ ಜನ ಜಾಗೃತಿ ಸಂಘದ ಜಿಲ್ಲಾಧ್ಯಕ್ಷ ದಿಲೀಪ್‌ಕುಮಾರ್ ಅವರನ್ನು ಅಭಿನಂದಿಸಿ ಅವರು ಮಾತನಾಡಿದರು. ಇತಿಹಾಸ ಪ್ರಸಿದ್ಧ ಚಿಕ್ಕಂಕನಹಳ್ಳಿ ಜಾತ್ರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಆಗಮಿಸಿದ 50ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಉಚಿತ ಅನ್ನಸಂತರ್ಪಣೆ ಏರ್ಪಡಿಸುವ ಮೂಲಕ ಇತಿಹಾಸ ನಿರ್ಮಿಸಿರುವ ದಿಲೀಪ್‌ಕುಮಾರ್‌ರ ಅನ್ನ ದಾಸೋಹ ನಿರಂತರವಾಗಲಿ ಎಂದು ಆಶಿಸಿದರು.

ವಿಶ್ವ ಒಕ್ಕಲಿಗರ ಜನಜಾಗೃತಿ ಸಂಘದ ರಾಜ್ಯಾಧ್ಯಕ್ಷ ಕೆ.ಎಂ. ರಾಮ ಕೃಷ್ಣ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಆರ್.ವಿ. ಸೋಮಣ್ಣ, ತಾಲ್ಲೂಕು ಅಧ್ಯಕ್ಷ ಯರಗನಹಳ್ಳಿ ಮಹಾಲಿಂಗು, ಮುಖಂಡರಾದ ಅಂಕನಾಥಪುರ ಶಂಕರ್, ರಾಮಣ್ಣ, ಶ್ರೀನಿವಾಸ್, ಪುರುಷೋತ್ತಮ್, ಕೋಡಿಬಾಳು ರಾಜಣ್ಣ, ಸಿದ್ದರಾಜು, ಕೆ.ಚಂದ್ರಶೇಖರ್, ರವಿ, ರಾಜು, ಪುಟ್ಟರಾಮು, ಹೂತಗೆರೆ ದಿನೇಶ್, ಕೆ.ಟಿ. ರಾಮಣ್ಣ, ಮಾಚಹಳ್ಳಿ ಕುಮಾರ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.