ಮದ್ದೂರು: ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆ-ಶೀಪ್) ಯೋಜನೆಯಡಿಯಲ್ಲಿ ತುಮಕೂರು ಹೆದ್ದಾರಿ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳನ್ನು ಕಡಿದು ಹಾಕಿರುವ ಘಟನೆ ಸಮೀಪದ ಹೆಮ್ಮನಹಳ್ಳಿ ರಸ್ತೆಯಲ್ಲಿ ನಿರಂತರ ನಡೆಯುತ್ತಿದೆ.
ಕಳೆದ ಒಂದು ವಾರದಿಂದ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಲಾಗಿದ್ದು, ಈ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ವಲಯ ಕಚೇರಿ ಎದುರಿನಲ್ಲೇ 5 ಬೃಹತ್ ಮರಗಳನ್ನು ಕಡಿದು ಧರೆಗೆ ಉರುಳಿಸಲಾಗಿದೆ. ಇದಕ್ಕೂ ಮುನ್ನ ಮಳವಳ್ಳಿ ರಸ್ತೆಯಲ್ಲಿ ಇದೇ ಹೆದ್ದಾರಿ ಅಗಲೀಕರಣ ಸಂಬಂಧ 200ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಿರುವುದು ಪಟ್ಟಣದ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಆಗ್ರಹ: ಟೆಂಡರ್ ಮೂಲಕ ನೂರಾರು ಮರಗಳನ್ನು ಕಡಿಯ ಲಾಗಿದ್ದು, ಕಡಿದ ಸ್ಥಳದಲ್ಲಿ ಈ ಕೂಡಲೇ ಅರಣ್ಯ ಇಲಾಖೆ ಹೊಸದಾಗಿ ಗಿಡ ನೆಡುವ ಕೆಲಸಕ್ಕೆ ಮುಂದಾಗ ಬೇಕು. ಅಲ್ಲದೇ ಸರ್ಕಾರೇತರ ಸ್ವಯಂ ಸೇವಾ ಸಂಘಟನೆಗಳ ನೆರವಿನೊಂದಿಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಲಾರಾ ಪ್ರಸನ್ನ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.