ADVERTISEMENT

ಪಾಂಡವಪುರ: ಕನ್ನಡ ಜಾತ್ರಾ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 7 ಜುಲೈ 2013, 11:15 IST
Last Updated 7 ಜುಲೈ 2013, 11:15 IST
ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಶನಿವಾರ ನಡೆದ 4ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿ . ಸಮ್ಮೇಳನಾಧ್ಯಕ್ಷ ಬಿ. ನಾರಾಯಣಗೌಡ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ, ಮಾಜಿ ಶಾಸಕರಾದ ಕೆ. ಕೆಂಪೇಗೌಡ, ಸಿ.ಎಸ್. ಪುಟ್ಟರಾಜು, ಜಿಕಸಾಪ ಮೀರಾಶಿವಲಿಂಗಯ್ಯ ಇತರರು ಇದ್ದಾರೆ.
ಪಾಂಡವಪುರ ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಶನಿವಾರ ನಡೆದ 4ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟಿಸಿ . ಸಮ್ಮೇಳನಾಧ್ಯಕ್ಷ ಬಿ. ನಾರಾಯಣಗೌಡ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ, ಮಾಜಿ ಶಾಸಕರಾದ ಕೆ. ಕೆಂಪೇಗೌಡ, ಸಿ.ಎಸ್. ಪುಟ್ಟರಾಜು, ಜಿಕಸಾಪ ಮೀರಾಶಿವಲಿಂಗಯ್ಯ ಇತರರು ಇದ್ದಾರೆ.   

ಪಾಂಡವಪುರ: ಪಟ್ಟಣದಲ್ಲಿ ಶನಿವಾರ ನಡೆದ 4ನೇ ತಾಲ್ಲೂಕು ಕನ್ನಡ ಸಾಹಿತ್ಯಳನದ ವೇದಿಕೆಗೆ ಸಮ್ಮೇಳನಾಧ್ಯಕ್ಷ ಪ್ರೊ.ಬಿ. ನಾರಾಯಣಗೌಡ ಅವರನ್ನು ಸಾಂಸ್ಕೃತಿಕ ಕಲಾ ಮೇಳಗಳ ಅದ್ದೂರಿ ಮೆರವಣಿಗೆಯೊಂದಿಗೆ ಕರೆತರಲಾಯಿತು.

ಬೆಳಿಗ್ಗೆ 8.30ರಲ್ಲಿ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ರಾಷ್ಟ್ರಧ್ವಜಾರೋಹಣವನ್ನು, ಜಿಲ್ಲಾ ಕಸಾಪ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ತಾಕಸಾಪ ಅಧ್ಯಕ್ಷ ಎಚ್.ಆರ್. ಧನ್ಯಕುಮಾರ್ ನಾಡ ಧ್ವಜರೋಹಣನವನ್ನು ನೆರವೇರಿಸಿದರು.

ಬೆಳಿಗ್ಗೆ 9.00 ಗಂಟೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎಂ. ರಾಮಕೃಷ್ಣ ಅವರು ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಶಾಲೆಯ ಮಕ್ಕಳ ಸೇವಾದಳ, ಕನ್ನಲಿ ಗ್ರಾಮದ ತಮಟೆ, ನಗಾರಿ ಮೇಳ. ಹೆಗ್ಗಡಹಳ್ಳಿಯ ಪಟಕುಣಿತ, ಲಕ್ಷ್ಮಿಸಾಗರದ ಗೊಂಬೆಕುಣಿತ, ಜಾಂಜ್‌ಮೇಳ, ಕೆನ್ನಾಳು ಗ್ರಾಮದ ಮದಕರಿ ನಾಯಕ ಸಂಘದ ದೊಣ್ಣೆ, ಕತ್ತಿವರಸೆ, ಅಂಗನವಾಡಿ ಕಾರ್ಯಕರ್ತೆಯರ ಪೂರ್ಣ ಕುಂಭ ಮೇಳ ಮೆರವಣಿಗೆಗೆ ಮೆರಗು ನೀಡಿದವು.

ಶೃಂಗರಿಸಲಾಗಿದ್ದ ಎತ್ತಿನಗಾಡಿಯಲ್ಲಿ ಸಮ್ಮೇಳನಾಧ್ಯಕ್ಷ  ಪ್ರೊ.ಬಿ. ನಾರಾಯಣಗೌಡ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ, ಮೀರಾ ಶಿವಲಿಂಗಯ್ಯ, ಎಚ್.ಆರ್. ಧನ್ಯಕುಮಾರ್ ಕುಳಿತು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸಮ್ಮೇಳನದ ವೇದಿಕೆಯನ್ನು ತಲುಪಿತು. ಸಾಂಸ್ಕೃತಿ ಕಲಾ ಮೇಳವನ್ನು ನೋಡಿದ ಪ್ರೇಕ್ಷಕರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.