ADVERTISEMENT

ಬಂಡಾಯಗಾರರನ್ನು ಕಣದಿಂದ ಹಿಂದೆ ಸರಿಸುವ ಯತ್ನ ಆರಂಭ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2013, 9:51 IST
Last Updated 20 ಏಪ್ರಿಲ್ 2013, 9:51 IST

ಮಂಡ್ಯ: ಪಕ್ಷದಿಂದ ಸಿಡಿದು ಬಂಡಾಯವಾಗಿ ಸ್ಪರ್ಧಿಸಿರುವ ಹಾಗೂ ಪಕ್ಷೇತರ ಅಭ್ಯರ್ಥಿಗಳನ್ನು ಚುನಾವಣಾ ಕಣದಿಂದ ಹಿಂದೆ ಸರಿಸಲು ವಿವಿಧ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರುಗಳು ತೀವ್ರ ಪ್ರಯತ್ನ ಆರಂಭಿಸಿದ್ದಾರೆ.

ಪ್ರಮುಖ ಪಕ್ಷಗಳಾದ ಜೆಡಿಎಸ್ ಹಾಗೂ ಕಾಂಗ್ರೆಸ್‌ನಿಂದ ಬಂಡಾಯ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಲು ಪಕ್ಷದ ಮುಖಂಡರಿಂದ ಒತ್ತಡ ಹಾಕಿಸುವ ಕೆಲಸಕ್ಕೆ ಅಭ್ಯರ್ಥಿಗಳು ಕೈ ಹಾಕಿದ್ದಾರೆ.

ಮತ ಒಡೆದು ಹಾನಿ ಉಂಟು ಮಾಡಬಹುದಾದ ಪಕ್ಷೇತರ ಅಭ್ಯರ್ಥಿಗಳನ್ನೂ ಕಣದಿಂದ ಹಿಂದೆ ಸರಿಸುವ ಅಂಗವಾಗಿ ಅವರೊಂದಿಗೆ ಮಾತುಕತೆಗಳು ನಡೆಯುತ್ತಿವೆ. ಅವರ ಬೇಡಿಕೆಗಳನ್ನು ಈಡೇರಿಸಿ, ತಮ್ಮ ಪರವಾಗಿ ಪ್ರಚಾರ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.