ADVERTISEMENT

ಮಂಡ್ಯ ಬಸ್‌ ದುರಂತ: ಚಾಲಕನ ಬಂಧನ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2018, 17:15 IST
Last Updated 9 ಡಿಸೆಂಬರ್ 2018, 17:15 IST
   

ಮಂಡ್ಯ: ಕನಗನಮರಡಿ ಬಸ್‌ ದುರಂತದಲ್ಲಿ 30 ಜನರ ಸಾವಿಗೆ ಕಾರಣನಾದ ಚಾಲಕನನ್ನು ಪಾಂಡವಪುರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆತ ಘಟನೆ ನಡೆದ 15 ದಿನಗಳ ನಂತರ ಪತ್ತೆಯಾಗಿದ್ದಾನೆ.

ಬಸರಾಳು ಗ್ರಾಮದ ಶಿವಣ್ಣ ಬಂಧಿತ ಬಸ್‌ ಚಾಲಕ. ನ.24ರಂದು ನಡೆದ ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿ ನಾಲ್ವರು ಮಾತ್ರ ಬದುಕುಳಿದಿದ್ದರು. 30 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ದುರಂತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ವರದಿ ನೀಡಿದ್ದರು.

ಚಾಲಕನ ಬಂಧನಕ್ಕಾಗಿ ಪೊಲೀಸರ ಎರಡು ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.