ADVERTISEMENT

‘ಮತ್ತೆ ಕಲ್ಯಾಣ’ ಕಾರ್ಯಕ್ರಮಕ್ಕೆ ಹೋಗಲ್ಲ: ಕೆ.ನೀಲಾ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 19:17 IST
Last Updated 31 ಜುಲೈ 2019, 19:17 IST
ಕೆ.ನೀಲಾ
ಕೆ.ನೀಲಾ   

ಮಂಡ್ಯ: ‘ಮತ್ತೆ ಕಲ್ಯಾಣ’ ಅಭಿಯಾನದಲ್ಲಿ ಸಂಘ ಪರಿವಾರದ ಪೋಷಕರು ಕಾಣಿಸಿಕೊಳ್ಳುತ್ತಿರುವುದನ್ನು ಖಂಡಿಸಿ ಆ.2ರಂದು ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಚಿಂತಕಿ ಕೆ.ನೀಲಾ ಬುಧವಾರ ಇಲ್ಲಿ ತಿಳಿಸಿದರು.

‘ಭಾರತವು ಚಾತುರ್ವರ್ಣ ವ್ಯವಸ್ಥೆಯಲ್ಲಿ ನಲುಗುತ್ತಿರುವಾಗ ಶರಣರು ಸಮಾನತೆ ಸಾರಿದರು. ಇಂತಹ ವಚನ ಚಳವಳಿಯ ಹಾದಿಯಲ್ಲಿ ನಡೆಯಬೇಕಾದ ಹೊಣೆ ಎಲ್ಲ ವಿವೇಕವಂತರ ಮೇಲಿದೆ. ಇಂತಹ ಸಂದರ್ಭದಲ್ಲಿ ‘ಮತ್ತೆ ಕಲ್ಯಾಣ’ ಅಭಿಯಾನ ನಡೆಯುತ್ತಿದೆ. ಮಂಗಳೂರು, ಉಡುಪಿಯ ಅಭಿಯಾನ ವಚನ ತತ್ವಕ್ಕೆ ವಿರುದ್ಧವಾಗಿದೆ‘ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT