ADVERTISEMENT

ಮನೆಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 10:26 IST
Last Updated 26 ಅಕ್ಟೋಬರ್ 2017, 10:26 IST
ಮನೆಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ
ಮನೆಮನೆಗೆ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ   

ಹಲಗೂರು(ಮಳವಳ್ಳಿ): ತಾಲ್ಲೂಕಿನ ಬಾಳೆಹೊನ್ನಿಗ ಗ್ರಾಮದಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಕಾಂಗ್ರೆಸ್ ಅಭಿಯಾನದ ಅಂಗವಾಗಿ ದೇವರಿಗೆ ಪೂಜೆ ಸಲ್ಲಿಸಿ ಪೂಜೆ ಸಲ್ಲಿಸಿ ಪ್ರಚಾರ ಪ್ರಾರಂಭಿಸಿದರು.

ಬಾಳೆಹೊನ್ನಿಗ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಕುಮಾರ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯ ಶಂಕರ್, ಸುಂದರ್‌ರಾಜ್, ಬಾಳೆಹೊನ್ನಿಗ ಗ್ರಾಮದ ವಾಸಿ ಶಂಕರ, ಎಚ್‌. ವಿ ರಾಜು, ಕಿಟ್ಟಿ, ಶಿವಕುಮಾರ್, ರಾಜು, ಕೃಷ್ಣ, ಬಾಬು, ಪುಟ್ಟೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT