ಕೆ.ಆರ್.ಪೇಟೆ: ಪುರಸಭೆ ವ್ಯಾಪ್ತಿಯಲ್ಲಿ ಬರುವ ಕೆ.ಆರ್.ಪೇಟೆ - ಹೊಸಹೊಳಲು ರಸ್ತೆಯಲ್ಲಿ ಯುಜಿಡಿ ಮ್ಯಾನ್ಹೋಲ್ ಆಗಾಗ ಉಕ್ಕಿ ಹರಿಯುವುದು ಸಾಮಾನ್ಯವಾಗಿಬಿಟ್ಟಿದೆ.
ಇದರ ಪರಿಣಾಮವಾಗಿ ಈ ಪ್ರಮುಖ ರಸ್ತೆಯಲ್ಲಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಕೊಳಚೆ ನೀರಿನ ಮೇಲೆಯೇ ಓಡಾಡುವಂತಾಗಿದೆ.
ಈ ಬಗ್ಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ ಶಾಶ್ವತ ಕಾಮಗಾರಿ ಆಗದೇ ತೇಪೆ ಹಚ್ಚುವ ಕೆಲಸ ನಡೆಯುತ್ತಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಗಮನಹರಿಸಿ ಪಟ್ಟಣದ ಪುರಸಭಾ ವ್ಯಾಪ್ತಿಯ ಎಲ್ಲ ಮ್ಯಾನ್ಹೋಲ್ಗಳ ಪರಿಶೀಲನೆಗೆ ತಂಡ ರಚಿಸಿ ವರದಿ ತರಿಸಿಕೊಂಡು ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಚ್.ಆರ್. ಲೋಕೇಶ್, ಪುರಸಭೆ ಸದಸ್ಯರು, ಕೆ.ಆರ್. ಪೇಟೆ
ಮದ್ದೂರು: ಪಟ್ಟಣದ ಕೆ.ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಬಿರುಗಾಳಿ ಮಳೆಗೆ ಮುರಿದು ಬಿದ್ದಿದ್ದ ಅರಳಿ ಮರದ ಅವಶೇಷಗಳನ್ನು 15 ದಿನಗಳು ಕಳೆದರೂ ವಿಲೇವಾರಿ ಮಾಡಿಲ್ಲ.
ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಇದೇ ಮರದ ಇನ್ನೊಂದು ಕೊಂಬೆಯೂ ಟೊಳ್ಳಾಗಿದ್ದು, ಇದನ್ನು ತೆರವುಗೊಳಿಸಲು ಆಸ್ಪತ್ರೆ ಆಡಳಿತಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ರಾಘವೇಂದ್ರರಾವ್, ಮದ್ದೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.