ಮಂಡ್ಯ: ‘ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಜನರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಲೋಕಸಭೆಗೆ ಸ್ಪರ್ಧೆ ಖಚಿತವಾಗಿದ್ದು, ಸೋಮವಾರ ಬೆಂಗಳೂರಿನಲ್ಲಿ ಅಧಿಕೃತವಾಗಿನನ್ನ ನಿಲುವು ಪ್ರಕಟಿಸುತ್ತೇನೆ’ ಎಂದು ನಟಿ ಸುಮಲತಾ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿ, ‘ಪ್ರವಾಸದ ಸಮಯದಲ್ಲಿ ರೈತರು, ಮಹಿಳೆಯರು, ಯುವಕರನ್ನು ಭೇಟಿ ಮಾಡಿದ್ದೇನೆ. ಎಲ್ಲರೂ ಬಹಳ ಪ್ರೀತಿಯಿಂದ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ನನ್ನ ಜೊತೆ ಅಂಬರೀಷ್ ಅಭಿಮಾನಿಗಳು ಒತ್ತಾಸೆಯಾಗಿ ನಿಂತಿದ್ದಾರೆ. ಬಿಜೆಪಿ ಬೆಂಬಲ ನೀಡುವ ಕುರಿತು ಮುಖಂಡರು ಅಧಿಕೃತವಾಗಿ ಯಾವುದೇ ಅಭಿಪ್ರಾಯ ತಿಳಿಸಿಲ್ಲ. ಬೆಂಬಲ ನೀಡುವಂತೆ ಎಸ್.ಎಂ.ಕೃಷ್ಣ ಅವರಿಗೆ ಕೋರಿದ್ದೇನೆ. ಅದು ಕೂಡ ಶೀಘ್ರ ಗೊತ್ತಾಗಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.