ADVERTISEMENT

‘ಸಿನಿಮಾದವರು ಮನೆಯಲ್ಲಿರಿ; ಜೆಡಿಎಸ್ ವಿರುದ್ಧ ಮಾತನಾಡಿದರೆ ಪರಿಣಾಮ ನೆಟ್ಟಗಿರದು‘

ನಟರಿಗೆ ಎಚ್ಚರಿಕೆ ಕೊಟ್ಟ ಕೆ.ಆರ್‌.ಪೇಟೆ ಶಾಸಕ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 5:57 IST
Last Updated 20 ಮಾರ್ಚ್ 2019, 5:57 IST
ಕೆ.ಸಿ.ನಾರಾಯಣಗೌಡ
ಕೆ.ಸಿ.ನಾರಾಯಣಗೌಡ   

ಕೆ.ಆರ್.ಪೇಟೆ: ‘ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿರಬೇಕು. ಹೊರಗೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿ ಬಿಟ್ಟರೆ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಶಾಸಕ ನಾರಾಯಣಗೌಡ ಮಂಗಳವಾರ ಎಚ್ಚರಿಕೆ ನೀಡಿದರು.

ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ‘ನಾವು ಟಿಕೆಟ್‌ ಪಡೆದು ಸಿನಿಮಾ ನೋಡುತ್ತಿರುವ ಕಾರಣದಿಂದ ನೀವು ಜೀವನ ನಡೆಸುತ್ತಿದ್ದೀರಿ. ಗೌರವದಿಂದ ಇರುವುದನ್ನು ಬಿಟ್ಟು ರಾಜಕೀಯ ಮಾಡಿದರೆ ಸುಮ್ಮನಿರುವುದಿಲ್ಲ. ಪಕ್ಷದ ಮುಖಂಡರ ವಿರುದ್ಧ ಲಘುವಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದೆ. ನಿಮ್ಮ ಅಕ್ರಮಗಳ ಜಾತಕ ಹೊರತರಬೇಕಾಗುತ್ತದೆ. ನೀವು ಮಾಡಿರುವ ಆಸ್ತಿ ಬಗ್ಗೆ ತನಿಖೆ ಮಾಡಿಸಿದರೆ ಬೀದಿಗೆ ಬೀಳುತ್ತೀರಿ’ ಎಂದು ಗುಡುಗಿದರು.

‘ದರ್ಶನ್ ಹಾಗೂ ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ನಿಮಗೂ ರಾಜಕೀಯಕ್ಕೂ ಏನು ಸಂಬಂಧ? ನಮ್ಮ ಟಿಕೆಟ್ ಹಣ ತಿಂದು ನೀವು ಬದುಕುತ್ತಿದ್ದೀರಿ. ಇದು ನಿಮಗೆ ನೆನಪಿರಲಿ. ರಾಜಕೀಯ ಮಾಡಲು ಬಂದರೆ ಸುಮ್ಮನೆ ಕೂರುವುದಿಲ್ಲ’ ಎಂದರು.

ADVERTISEMENT

ಎಂದು ಶಾಸಕ ನಾರಾಯಣಗೌಡ ಮಂಗಳವಾರ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.