ADVERTISEMENT

30 ಸಾವಿರ ಟನ್‌ ಮೀನು ಉತ್ಪಾದನೆ

ಜಿಲ್ಲೆಯಲ್ಲಿ ಉತ್ತಮ ಮಾರುಕಟ್ಟೆ ರಚಿಸಿ, ಮೀನು ಬೆಳೆಗಾರರನ್ನು ಪ್ರೋತ್ಸಾಹಿಸಿ: ಡಿಸಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 7:59 IST
Last Updated 30 ಜುಲೈ 2025, 7:59 IST
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಪಾಲ್ಗೊಂಡಿದ್ದರು 
ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯು ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್‌.ನಂದಿನಿ ಪಾಲ್ಗೊಂಡಿದ್ದರು    

ಮಂಡ್ಯ: ‘ಜಿಲ್ಲೆಯಲ್ಲಿ ಪ್ರತಿ ವರ್ಷ ಸರಾಸರಿ 30 ಸಾವಿರ ಟನ್ ಮೀನು ಉತ್ಪಾದನೆಯಾಗುತ್ತಿದೆ. ಉತ್ತಮ ಮಾರುಕಟ್ಟೆ ರಚಿಸಿ ಮೀನು ಬೆಳೆಗಾರರನ್ನು ಪ್ರೋತ್ರಾಹಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.

ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ 2025-26ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇಲಾಖೆಯ 177 ಕೆರೆಗಳು ಹಾಗೂ ಗ್ರಾಮ ಪಂಚಾಯಿತಿಯ 688 ಕೆರೆಗಳು ಸೇರಿ ಒಟ್ಟು 865 ಕೆರೆಗಳು ಹಾಗೂ 26 ನದಿ ಭಾಗಗಳು ಮತ್ತು 4 ಜಲಾಶಯಗಳಲ್ಲಿ ಮೀನು ಸಾಕಾಣಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಕಳೆದ ಐದು ವರ್ಷಗಳಿಂದ 742 ಫಲಾನುಭವಿಗಳಿದ್ದಾರೆ. ಈ ಯೋಜನೆಯಡಿ ಈವರೆಗೆ 150 ಫಲಾನುಭವಿಗಳಿಗೆ ಸುಮಾರು ₹5.13 ಕೋಟಿ ಸಹಾಯಧನ ನೀಡಲಾಗಿದೆ ಎಂದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಬಾಬಾ ಸಾಬ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಲೊಕೇಶ್ ಕೆ.ಎಂ., ಮಹಾದೇವ ಸ್ವಾಮಿ, ಜಗದೀಶ್ ಟಿ.ಡಿ., ಪುಷ್ಪಲತಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ್, ಪ್ರಗತಿಪರ ರೈತ ಸಿ.ಎನ್. ಸುರೇಶ್ ಇದ್ದರು. 

Highlights - ಅಂಕಿಅಂಶ 306; 2024-25ನೇ ಸಾಲಿನಲ್ಲಿ ಕೆರೆಗಳ ಅಭಿವೃದ್ಧಿ 47; ಮೀನುಗಾರರ ಸಹಕಾರ ಸಂಘ ಕಾರ್ಯನಿರ್ವಹಣೆ 45; ಸಾವಿರ ಮೀನುಗಾರರು ಜಿಲ್ಲೆಯಲ್ಲಿದ್ದಾರೆ 

ಸಹಾಯಧನ ಪಡೆದ ಮೀನುಗಾರರಿಗೆ ಮೀನು ಸಾಕಾಣಿಕೆ ಕುರಿತು ತರಬೇತಿ ನೀಡಿ. ಯಾವುದೇ ಕಾರಣಕ್ಕೂ ಸಹಾಯಧನ ದುರುಪಯೋಗವಾಗದಂತೆ ಕ್ರಮವಹಿಸಿ
– ಕೆ.ಆರ್. ನಂದಿನಿ ಸಿಇಒ ಮಂಡ್ಯ ಜಿಲ್ಲಾ ಪಂಚಾಯಿತಿ

ಮತ್ಸ್ಯ ಸಂಪದ: ₹2.24 ಕೋಟಿ ಸಹಾಯಧನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2024-25ನೇ ಸಾಲಿನಲ್ಲಿ ₹2.24 ಕೋಟಿ ಸಹಾಯಧನ ನೀಡಲಾಗಿದೆ. ಸಹಾಯಧನ ಪಡೆದವರು ಸಮರ್ಪಕವಾಗಿ ಯೋಜನೆಯನ್ನು ಬಳಸಿಕೊಳ್ಳುತ್ತಿದ್ದಾರಾ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಿ ಕೃಷಿ ಹೊಂಡಗಳಲ್ಲಿ ಮೀನು ಸಾಕಾಣಿಕೆ ಮಾಡುವವರಿಗೆ ಪ್ರೋತ್ಸಾಹ ನೀಡಿ ಎಂದು ಹೇಳಿದರು. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕಳೆದ ಐದು ವರ್ಷಗಳಲ್ಲಿ ನೀಡಲಾಗಿರುವ ಸೌಲಭ್ಯ ಹಾಗೂ ಸಹಾಯಧನ ಮತ್ತು ಯೋಜನೆಯ ಸಾಧನೆ ಕುರಿತಾಗಿ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.