ಭಾರತೀನಗರ (ಮಂಡ್ಯ ಜಿಲ್ಲೆ): ಇಲ್ಲಿಗೆ ಸಮೀಪದ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆಬೆಳ್ಳೂರಿನಲ್ಲಿ ಸೋಮವಾರ ಸಂಜೆ ಪೆಲಿಕಾನ್ ಅಸ್ವಸ್ಥಗೊಂಡು ಕೆಳಕ್ಕೆ ಉರುಳಿ ಬಿದ್ದಿದೆ. ತಿಂಗಳಿಂದೀಚೆಗೆ ಕೊಕ್ಕರೆಗಳ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
‘ಈಗಾಗಲೇ ಸತ್ತಿರುವ ಕೊಕ್ಕರೆಗಳು ಜಂತುಹುಳು ಕಾರಣದಿಂದ ಸತ್ತಿವೆ ಎಂದು ಪ್ರಯೋಗಾಲಯದ ವರದಿ ಆಧಾರದ ಮೇಲೆ ಅಧಿಕಾರಿಗಳು ಹೇಳುತ್ತಾರೆ. ಆದರೂ ಜನರಲ್ಲಿ ಹಕ್ಕಿ ಜ್ವರದ ಭೀತಿ ಹರಡಿದೆ. ಅಧಿಕಾರಿಗಳು ಇಲ್ಲೇ ವಾಸ್ತವ್ಯ ಮಾಡಿ, ಕೊಕ್ಕರೆಗಳ ಆರೋಗ್ಯ ಸ್ಥಿತಿ ಗಮನಿಸಬೇಕು. ಗ್ರಾಮದ ಜನರ ಆತಂಕ ನಿವಾರಣೆ ಮಾಡಬೇಕು. ಕೊಕ್ಕರೆಗಳ ಸಾವನ್ನು ತಡೆಗಟ್ಟಬೇಕು’ ಅವರು ಲಿಂಗೇಗೌಡ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.